ಕರಾವಳಿರಾಜ್ಯ ವಾರ್ತೆ

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಡ್ರೈವ‌ರ್ ಸಾವು!!

GL
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವ‌ರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಬಳಿ ನಡೆದಿದೆ. ಕಿರಣ್ (39) ಮೃತಪಟ್ಟ ಡ್ರೈವರ್ ಎಂದು ತಿಳಿದು ಬಂದಿದೆ. ಇವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವ‌ರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಬಳಿ ನಡೆದಿದೆ. ಕಿರಣ್ (39) ಮೃತಪಟ್ಟ ಡ್ರೈವರ್ ಎಂದು ತಿಳಿದು ಬಂದಿದೆ. ಇವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

core technologies

ನೆಲಮಂಗಲ ಕಡೆಯಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಅನ್ನು ಚಾಲನೆ ಮಾಡಿಕೊಂಡು ಬರುವಾಗ ಡ್ರೈವರ್ ಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಬಸ್ ನಿಲ್ಲಿಸಿದ್ದನು. ಈ ವೇಳೆ ಬಿಎಂಟಿಸಿ ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.

ಎದೆನೋವು ತೀವ್ರವಾಗಿ ಕಾಣಿಸಿಕೊಂಡು ಹೃದಯಾಘಾತದಿಂದ ಡ್ರೈವ‌ರ್ ಸಾವನ್ನಪ್ಪಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರಿಗರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts