tamanvi
ರಾಜ್ಯ ವಾರ್ತೆ

ಶಾಕಿಂಗ್ ನ್ಯೂಸ್!! ಗಡಿಜಿಲ್ಲೆಯ 31 ಬಗೆಯ ಆಹಾರಗಳು ಸೇವನೆಗೆ ಅಸುರಕ್ಷಿತ!! ಆಹಾರ ಸುರಕ್ಷೆ ಹಾಗೂ ಗುಣಮಟ್ಟ ಇಲಾಖೆಯ ವರದಿ!!

D_shiva_bhat
ಪ್ರವಾಸಿಗರ ಆಕರ್ಷಣೆಯಲ್ಲೊಂದಾಗಿ ರಾಜ್ಯದಲ್ಲೇ ಪ್ರಥಮ ಎಂಬಂತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) 2021ರಲ್ಲಿ ಮಲ್ಪೆ ಬೀಚ್‌ನಲ್ಲಿ ಪ್ರಾರಂಭಗೊಂಡಿದ್ದು, ಈ ಬಾರಿ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಕುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಆಹಾರ ಸುರಕ್ಷೆ ಹಾಗೂ ಗುಣಮಟ್ಟದ ಇಲಾಖೆಯು ಕೇರಳದಲ್ಲಿ ತಯಾರಿಸಿ, ಕರ್ನಾಟಕದ ಗಡಿ ಜಿಲ್ಲೆಯಲ್ಲಿ ಮಾರಾಟ ಮಾಡುತ್ತಿದ್ದ 90 ಬಗೆಯ ಕುರುಕಲು ತಿಂಡಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 31 ಮಾದರಿಗಳು ಸೇವಿಸಲು ಅಸುರಕ್ಷಿತ ಎನ್ನುವುದು ದೃಢವಾಗಿದೆ.

ಅವುಗಳಲ್ಲಿ ಸುಮಾರು 31 ಮಾದರಿಗಳು ಅಸುರಕ್ಷಿತ ಎನ್ನುವುದು ದೃಢವಾಗಿದೆ. ಇದರಲ್ಲಿ ಸನ್‌ಸೆಟ್ ಯೆಲ್ಲೋ, ಅಲ್ಲೂರ ರೆಡ್, ಅಜೋರುಬಿನ್, ಟಾಟ್ರಾÌಜಿನ್ ಮತ್ತಿತರ ಕೃತಕ ಬಣ್ಣಗಳನ್ನು ಬಳಸಿರುವುದು ದೃಢವಾಗಿದೆ.

ಇತರ ಜಿಲ್ಲೆಗಳಿಗೂ ಸರಬರಾಜು ಶಂಕೆ
ಕೊಡಗು ಮಾತ್ರವಲ್ಲದೆ ಕಾಸರಗೋಡು, ದಕ್ಷಿಣ ಕನ್ನಡ, ಬೆಂಗಳೂರು ಸೇರಿ ಇತರ ಜಿಲ್ಲೆಗಳಿಗೂ ಕೇರಳದ ಈ ಚಿಪ್ಸ್ ಹಾಗೂ ಇತರ ಕುರುಕಲು ತಿಂಡಿ ಸರಬರಾಜು ಆಗುತ್ತಿದೆ. ಇವುಗಳ ಪರೀಕ್ಷೆ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರಸ್ತುತ ಅಸುರಕ್ಷಿತ ಮಾದರಿಗಳಲ್ಲಿ ಪತ್ತೆಯಾದ ಅಲ್ಲೂರ ರೆಡ್ ರಾಸಾಯನಿಕ ಅಂಶ ಮನುಷ್ಯನ ದೇಹ ಸೇರಿದರೆ ಅಲ್ಸರೇಟಿವ್ ಕೊಲೈಟಿಸ್‌ ಮತ್ತು ಕ್ರಾನ್ಸ್ ನಂತಹ ಕರುಳಿನ ಉರಿಯೂತ ಕಾಯಿಲೆಗಳಿಗೆ ಕಾರಣವಾಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…