tamanvi
ರಾಜ್ಯ ವಾರ್ತೆ

ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ బಲಿ!!

D_shiva_bhat
ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್‌ಎಫ್‌ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್‌ಎಫ್‌ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

maithri

ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ ನಡುವೆ ಎಎನ್ ಎಫ್, ನಕ್ಸಲರ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…