tamanvi
ರಾಜ್ಯ ವಾರ್ತೆ

ಮಗನನ್ನು ನೋಡಲು ಕಾರಗೃಹಕ್ಕೆ ಬಂದ ತಂದೆ ಜೈಲು ಪಾಲು!!

D_shiva_bhat
ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

maithri

ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವಣ್ಣ ಪುತ್ರ ಮಧುಸೂದನ್ ಜೈಲು ಸೇರಿದ್ದ. ಜೈಲಿನಲ್ಲಿದ್ದ ಮಧುಸೂಧನ್ ತಂದೆಗೆ ಕರೆ ಮಡಿ ನನ್ನ ಪರಿಚಿತನೊಬ್ಬ ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್ ಕೊಡುತ್ತಾನೆ. ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ. ಮಗನ ಮಾತು ಕೇಳಿ ಶಿವಣ್ಣ ಮಳವಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯಿಂದ ಬಟ್ಟೆ ಬ್ಯಾಗ್‌ ಪಡೆದು ಮಂಡ್ಯ ಕಾರಗೃಹಕ್ಕೆ ಹೋಗಿದ್ದಾರೆ.

ಕಾರಾಗೃಹದಲ್ಲಿ ಜೈಲು ಸಿಬ್ಬಂದಿ ಬ್ಯಾಗ್ ಪ್ರಿಶೀಲಿಸಿದಾಗ ಅದರಲ್ಲಿ 20 ಗ್ರಾಮ್ ಗಾಂಜಾ ಪತ್ತೆಯಾಗಿದೆ. ತಕ್ಷಣ ಕಾರಾಗೃಹ ಸಿಬ್ಬಂದಿ ಶಿವಣ್ಣನನ್ನು ಬಂಧಿಸಿ ವಿಚರಣೆ ನಡೆಸಿದ್ದಾರೆ. ಮಗ ಹೇಳಿದಂತೆ ಬಟ್ಟೆ ಬ್ಯಾಗ್‌ ತಂದಿದ್ದೇನೆ ಎಂದಿದ್ದಾರೆ. ಎನ್ ಡಿ ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಶಿವಣ್ಣ ಅವರನ್ನು ಬಂಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…