Gl
ರಾಜ್ಯ ವಾರ್ತೆ

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ!!

ಉಚಿತ ಕರೆಂಟ್ ನಿಂದ ಕಂಗೆತ್ತಿರುವ ಎಲ್ಲ ಎಸ್ಕಾಂ ಗಳು ರಾಜ್ಯ ಸರ್ಕಾರಕ್ಕೆ ವಿದ್ಯುತ್ ದರವನ್ನು ಏರಿಸಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Current Bill: ಅಭಿವೃದ್ಧಿ ಯೋಜನೆಗಳಿಗೆ ಹಣವನ್ನು ಹೊಂದಿಸಲು ಹೆಣಗಾಡುತ್ತಿರುವ ಸರ್ಕಾರ ದಿನೇದಿನೇ ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣದ ಟಿಕೆಟ್ ದರ, ಹಾಲು ದರ ಏರಿಕೆಯನ್ನು ಮಾಡುತ್ತಿದೆ. ಅಂತೆಯೇ ಇದೀಗ ವಿದ್ಯುತ್ ಬಿಲ್ ಏರಿಕೆಗೂ ಕೂಡ ಪ್ರಸ್ತಾವನೆಯನ್ನು ಸಲ್ಲಿಸಿ, ರಾಜ್ಯದ ಜನತೆಗೆ ಶಾಕ್ ನೀಡಿದೆ.

Pashupathi

ಉಚಿತ ಕರೆಂಟ್ ನಿಂದ ಕಂಗೆತ್ತಿರುವ ಎಲ್ಲ ಎಸ್ಕಾಂ ಗಳು ರಾಜ್ಯ ಸರ್ಕಾರಕ್ಕೆ ವಿದ್ಯುತ್ ದರವನ್ನು ಏರಿಸಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸಿದೆ. ಹೀಗಾಗಿ ಏಪ್ರಿಲ್ ತಿಂಗಳಿನಿಂದ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಆಘಾತ ಎದುರಾಗಲಿದ್ದು, ಒಂದು ಯುನಿಟ್ ಗೆ ರೂ.1 ರಿಂದ ಒಂದೂವರೆ ರೂಪಾಯಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದ ಏಪ್ರಿಲ್‌ನಿಂದಲೇ ಹೊಸ ಏರಿಕೆ ದರ ಅನ್ವಯವಾಗುವ ಸಾಧ್ಯತೆ ಇದೆ.

ವಿದ್ಯುತ್‌ ಖರೀದಿ, ಪೂರೈಕೆಗೆ ಅಧಿಕ ವೆಚ್ಚ, ಕಲ್ಲಿದ್ದಲು ಸಂಗ್ರಹಣೆ ವೆಚ್ಚ ಸೇರಿ ಸರ್ಕಾರಕ್ಕೆ ಹೆಚ್ಚುವರಿ ಹಣಕಾಸಿನ ಹೊಡೆತ ಬೀಳುತ್ತಿದೆ. ಹೀಗಾಗಿ ಆರ್ಥಿಕ ಒತ್ತಡ ಸರಿ ದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…