Gl jewellers
ಸ್ಥಳೀಯ

ಪುಡಾಕ್ಕೆ ನೂತನ ಅಧ್ಯಕ್ಷರ ಆಯ್ಕೆ

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ನ್ಯಾಯಾವಾದಿ ಭಾಸ್ಕರ ಕೋಡಿಂಬಾಳರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಗರಾಭಿವೃದ್ದಿ ಇಲಾಖೆಯ ಅದೀನ ಕಾರ್ಯದರ್ಶಿ ಲತಾ ಕೆ.ರವರು ರಾಜ್ಯಪಾಲರ ಅಜ್ಞಾನುಸಾರ ಮಾ 13ರಂದು ಆದೇಶ ಹೊರಡಿಸಿದ್ದಾರೆ. ಶಾಸಕ ಅಶೋಕ್ ರೈಯವರು ಅಮಳ ರಾಮಚಂದ್ರರವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

Papemajalu garady
Karnapady garady

ಕೊಳ್ತಿಗೆ ಸೌಹಾರ್ದ ಸಮಿತಿಯ ಕಾರ್ಯಾಧ್ಯಕ್ಷ, ಪುತ್ತೂರು ಎಸ್ ಡಿಎಂಸಿ ಒಕ್ಕೂಟದ ಅಧ್ಯಕ್ಷ, ಮೆಡಿಕಲ್‌ ಕಾಲೇಜ್ ಹೋರಾಟ ಸಮಿತಿಯ ಪ್ರಮುಖ ನಾಯಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಸ್ಥಾಪಕ ಪ್ರಧಾನ ಸಂಚಾಲಕರಾಗಿ 8 ವರ್ಷಗಳ ಕಾರ್ಯ ನಿರ್ವಹಿಸಿದ್ದರು. ಇದೀಗ 2024ರಲ್ಲಿ ಮತ್ತೆ ಪ್ರಧಾನ ಸಂಚಾಲಕರಾಗಿ ನೇಮಕಗೊಂಡಿದ್ದರು.

ಅಮಳ ನಿವಾಸಿ ಅಮಳ ರಾಮಚಂದ್ರ ಅವರು ಕಳೆದ ವರ್ಷದಿಂದ ಮಗನ ವಿದ್ಯಭ್ಯಾಸದ ನಿಮಿತ್ತ ಪುತ್ತೂರಿನಲ್ಲಿ ಎಪಿಎಂಸಿ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ