tamanvi
ಸ್ಥಳೀಯ

ಪುಡಾಕ್ಕೆ ನೂತನ ಅಧ್ಯಕ್ಷರ ಆಯ್ಕೆ

D_shiva_bhat
ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ನ್ಯಾಯಾವಾದಿ ಭಾಸ್ಕರ ಕೋಡಿಂಬಾಳರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಗರಾಭಿವೃದ್ದಿ ಇಲಾಖೆಯ ಅದೀನ ಕಾರ್ಯದರ್ಶಿ ಲತಾ ಕೆ.ರವರು ರಾಜ್ಯಪಾಲರ ಅಜ್ಞಾನುಸಾರ ಮಾ 13ರಂದು ಆದೇಶ ಹೊರಡಿಸಿದ್ದಾರೆ. ಶಾಸಕ ಅಶೋಕ್ ರೈಯವರು ಅಮಳ ರಾಮಚಂದ್ರರವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

maithri

ಕೊಳ್ತಿಗೆ ಸೌಹಾರ್ದ ಸಮಿತಿಯ ಕಾರ್ಯಾಧ್ಯಕ್ಷ, ಪುತ್ತೂರು ಎಸ್ ಡಿಎಂಸಿ ಒಕ್ಕೂಟದ ಅಧ್ಯಕ್ಷ, ಮೆಡಿಕಲ್‌ ಕಾಲೇಜ್ ಹೋರಾಟ ಸಮಿತಿಯ ಪ್ರಮುಖ ನಾಯಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಸ್ಥಾಪಕ ಪ್ರಧಾನ ಸಂಚಾಲಕರಾಗಿ 8 ವರ್ಷಗಳ ಕಾರ್ಯ ನಿರ್ವಹಿಸಿದ್ದರು. ಇದೀಗ 2024ರಲ್ಲಿ ಮತ್ತೆ ಪ್ರಧಾನ ಸಂಚಾಲಕರಾಗಿ ನೇಮಕಗೊಂಡಿದ್ದರು.

ಅಮಳ ನಿವಾಸಿ ಅಮಳ ರಾಮಚಂದ್ರ ಅವರು ಕಳೆದ ವರ್ಷದಿಂದ ಮಗನ ವಿದ್ಯಭ್ಯಾಸದ ನಿಮಿತ್ತ ಪುತ್ತೂರಿನಲ್ಲಿ ಎಪಿಎಂಸಿ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126