ಸ್ಥಳೀಯ

ದೂರಿನ ಹಿನ್ನೆಲೆ: ತಾಲೂಕು ಕಚೇರಿಗೆ ಹಠಾತ್ ದಾಳಿ ನಡೆಸಿದ ಶಾಸಕ ಅಶೋಕ್ ಕುಮಾರ್ ರೈ!

GL
ಪುತ್ತೂರು ತಾಲೂಕು ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಶನಿವಾರ ಬೆಳಿಗ್ಗೆ ಹಠಾತ್ ದಾಳಿ ನಡೆಸಿದ ಘಟನೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ತಾಲೂಕು ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಶನಿವಾರ ಬೆಳಿಗ್ಗೆ ಹಠಾತ್ ದಾಳಿ ನಡೆಸಿದ ಘಟನೆ ನಡೆಯಿತು.

chennai-shopping
maithri

ಸಾರ್ವಜನಿಕ ದೂರಿನ‌ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ತಾಲೂಕು ಕಚೇರಿ ಸಿಬ್ಬಂದಿಗಳು ತಡವಾಗಿ ಕಚೇರಿಗೆ ಆಗಮಿಸುತ್ತಾರೆ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಭೇಟಿ ನೀಡಿದ ಶಾಸಕರು, ಕಚೇರಿಗಳನ್ನು ಪರಿಶೀಲನೆ ನಡೆಸಿದರು.

ಇಬ್ಬರು ಸಿಬ್ಬಂದಿಗಳು ಗೈರಾಗಿದ್ದರು ಎಂದು ತಿಳಿದುಬಂದಿದೆ.

ಉಳಿದಂತೆ ಎಲ್ಲಾ ಕಚೇರಿಗಳಲ್ಲೂ ಸಿಬಂದಿಗಳು, ಅಧಿಕಾರಿಗಳು ಹಾಜರಿದ್ದರು.

10 ಗಂಟೆಗೇ ಕಚೇರಿಯಲ್ಲಿರಬೇಕು: ಶಾಸಕರ ಸೂಚನೆ
ಎಲ್ಲಾ ಅಧಿಕಾರಿಗಳು,‌ ಸಿಬಂದಿಗಳು, ಬೆಳಿಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಕಚೇರಿಗೆ ತಡವಾಗಿ ಬರುವುದನ್ನು ನಾನು ಸಹಿಸುವುದಿಲ್ಲ.‌ಜನರ ಕೆಲಸ ಮಾಡಬೇಕು. ಜನ ಕಚೇರಿಗೆ ಬರುವಾಗ ಅಧಿಕಾರಿ,ಸಿಬಂದಿಗಳು ಇರಬೇಕು , ದೂರುಗಳು ಬಾರದ ಹಾಗೇ ಅವರೇ ನೋಡಿಕೊಳ್ಳಬೇಕು. ಇವತ್ತು ಕಚೇರಿಯಲ್ಲಿ ಇಲ್ಲದ ಇಬ್ಬರಿಗೆ ಶೋಕಾಸ್ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದ್ದೇನೆ, ಸಹಾಯಕ‌ ಕಮಿಷನರ್ ಗೂ ಈ ವಿಚಾರದಲ್ಲಿ ಸೂಚನೆ ನೀಡಿದ್ದೇನೆ, ತಹಶಿಲ್ದಾರ್ ಗೂ ಸೂಚನೆ ನೀಡಿದ್ದೇನೆ

ಅಶೋಕ್ ರೈ, ಶಾಸಕರು,ಪುತ್ತೂರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122