Gl jewellers
ಸ್ಥಳೀಯ

ಆರ್ಯಾಪು: ಹೊತ್ತಿ ಉರಿದ ದನದ ಕೊಟ್ಟಿಗೆ ! ರಸ್ತೆಯಿಲ್ಲದೇ ಪರದಾಡಿದ ಅಗ್ನಿಶಾಮಕ ದಳ ಸಿಬ್ಬಂದಿ!!

ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು, ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು, ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

Pashupathi
Papemajalu garady
Karnapady garady

ಮೋಹನ್ ಭಂಡಾರಿ ಎಂಬವರ ಮನೆ ಇದಾಗಿದ್ದು, ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ.

ಮನೆ ಪಕ್ಕದಲ್ಲೇ ಇದ್ದ ಹಟ್ಟಿಗೆ ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ತಕ್ಷಣ ಜಾಗೃತರಾಗಿ ದನಗಳನ್ನು ಹೊರ ಕರೆದೊಯ್ದಿದ್ದಾರೆ. ಆದರೆ ಬೆಂಕಿ ಆರಿಸಲು ಹರಸಾಹಸ ಪಟ್ಟ ಘಟನೆ ಮಾತ್ರ ಅರಣ್ಯರೋಧನವಾಯಿತು.

ಕಾರ್ಪಾಡಿ ದೇವಸ್ಥಾನದ ಮಗ್ಗುಲಲ್ಲೇ ಇರುವ ಆರ್ಯಾಪು ಬೈಲಿನ ಕೆಲ ಮನೆಗಳಿಗೆ ಇಂದೂ ಕೂಡ ರಸ್ತೆ ಇಲ್ಲ. ಕಳೆದ ಹಲ ವರ್ಷಗಳಿಂದ ರಸ್ತೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಯಾರೂ ಬೆಲೆ ನೀಡಿಲ್ಲ. ಮನೆ ಹಿರಿಯರು ಅನಾರೋಗ್ಯಕ್ಕೆ ತುತ್ತಾದಾಗಲೂ ಎತ್ತಿಕೊಂಡು ಹೋಗಿ ಆಸ್ಪತ್ರೆ ಸೇರಿಸಿದ ಉದಾಹರಣೆ ಇಲ್ಲಿದೆ. ಇದೀಗ ದನದ ಕೊಟ್ಟಿಗೆಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಶಮನ ಮಾಡಲು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.

ಕೆಲವೇ ಕ್ಷಣದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಜರಾದರು. ಆದರೇನು ಮಾಡುವುದು. ದೇವಳದವರೆಗೆ ಬಂದ ಸಿಬ್ಬಂದಿ, ರಸ್ತೆ ಇಲ್ಲದ ಪರಿಸ್ಥಿತಿ ಕಂಡು ಹೌಹಾರಿದರು.

ಆದರೇನು ಮಾಡುವುದು ಬೆಂಕಿ ಆರಿಸಲು ರಸ್ತೆ ಬೇಕೇ ಬೇಕೆಂದು ಪಟ್ಟು ಹಿಡಿದು ಕೂರುವಂತಿಲ್ಲ. ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಿ, ಹೇಗೋ ಬೆಂಕಿ ಆರಿಸಲಾಯಿತು. ಸ್ಥಳೀಯರು ಕೈಗೂಡಿಸಿದರು.

ಇಂತಹ ಘಟನೆಗಳಿಂದ ಪರಿಸ್ಥಿತಿ ಇನ್ನಷ್ಟು ಅತಿರೇಕಕ್ಕೆ ಹೋಗುವ ಮೊದಲು ಅಧಿಕಾರಿಗಳು, ಜನಪ್ರತಿನಿಧಿಗಳು ಕಾರ್ಯೋನ್ಮುಖರಾದರೆ ಒಳಿತು. ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆ ನಿರ್ಮಾಣವಾದರೆ ಈ ಭಾಗದ ಅನೇಕ ಮನೆಗಳವರು ನಿಟ್ಟುಸಿರು ಬಿಟ್ಟಾರು.

ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಮನೆಯವರು ಅಂದಾಜಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ