ಸ್ಥಳೀಯ

ಕಬಕ – ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಫೀಡಿಂಗ್ ರೂಮ್, ಶಿಶುಪಾಲನಾ ಕೇಂದ್ರ ಉದ್ಘಾಟನೆ|ರೋಟರಿ ಕ್ಲಬ್ ಪುತ್ತೂರು ಯುವದ ಕೊಡುಗೆ

ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಕಬಕ - ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಎದೆಹಾಲು ಕುಡಿಯುವ ಕೇಂದ್ರ ಹಾಗೂ ಶಿಶುಪಾಲನಾ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಕಬಕ – ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಎದೆಹಾಲು ಕುಡಿಯುವ ಕೇಂದ್ರ ಹಾಗೂ ಶಿಶುಪಾಲನಾ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು.

maithri

ರೋಟರಿ ಗವರ್ನರ್ ಭೇಟಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ತಾಯಿ ಶ್ರೇಯಸ್ವಿ ಎಸ್.ಆರ್. ಹಾಗೂ ಮಗು ಇಶಾ ಲಕ್ಷ್ಮೀ ಫೀಡಿಂಗ್ ರೂಮನ್ನು ಉದ್ಘಾಟಿಸಿದರು.

ರೋಟರಿ ಗವರ್ನರ್ ವಿಕ್ರಂ ದತ್ತ ಮಾತನಾಡಿ, ಜಿಲ್ಲೆಯಲ್ಲಿ ರೋಟರಿ ಕೊಡುಗೆಯಾಗಿ ನೀಡುತ್ತಿರುವ ಎರಡನೇ ಘಟಕ ಇದು. ಅತೀ ಅವಶ್ಯವಾದ ಈ ಘಟಕ ನೀಡಿದ ಕ್ಲಬ್ಬಿಗೆ ಜಿಲ್ಲಾ ರೋಟರಿ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.

ರೋಟರಿಯ ಏಳು ಫೋಕಸ್ ಏರಿಯಾದಲ್ಲಿ ಒಂದಾದ ಫೀಡಿಂಗ್ ರೂಮ್, ರೈಲ್ವೇ ನಿಲ್ದಾಣದಲ್ಲಿ ಅಗತ್ಯವಾಗಿದೆ ಎಂದರು.

ಕ್ಲಬ್ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ, ತಾಯಿ ಹಾಲು ಅಮೃತ. ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ತಾಯಿ ಹಾಲು ಅತೀ ಅವಶ್ಯ. ಈ ಹಿನ್ನೆಲೆಯಲ್ಲಿ ಎದೆ ಹಾಲು ನೀಡುವ ಹಾಗೂ ಶಿಶು ಪಾಲನಾ ಕೇಂದ್ರವನ್ನು ಕೊಡುಗೆಯಾಗಿ ನೀಡುತ್ತಿದ್ದೇವೆ. ರೈಲ್ವೇ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಲಿ ಎಂದರು.

ರೈಲ್ವೇ ಮುಖ್ಯ ಟಿಕೇಟ್ ನಿರೀಕ್ಷಕ ವಿಠಲ್ ನಾಯಕ್ ಮಾತನಾಡಿ, ರೈಲ್ವೇ ಪ್ರಯಾಣಿಕರಿಗೆ ಈ ಫೀಡಿಂಗ್ ರೂಂ ಉಪಯುಕ್ತ. ಇಂದು ರೈಲ್ವೇಯ ಎಸಿ ಕೋಚ್ ನಲ್ಲಿ ಫೀಡಿಂಗ್ ರೂಂ ಇದೆ. ರೋಟರಿಯ ಎಲ್ಲರಿಗೂ ದನ್ಯವಾದ ಎಂದರು.

ಸ್ಟೇಷನ್ ಮಾಸ್ಟರ್ ಸ್ವತಂತ್ರ ಮಿಶ್ರಾ, ಸಂಕೇತ ಕಚೇರಿಯ
ಭಾವೇಶ್ ಕುಮಾರ್ ಭಾರತೀ, ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ, ಕೋಶಾಧಿಕಾರಿ ಅಭೀಷ್, ಅಸಿಸ್ಟೆಂಟ್ ಗವರ್ನರ್ ಡಾ. ಹರ್ಷ ಕುಮಾರ್ ರೈ ಮಾಡಾವು, ಝೋನಲ್ ಲೆಫ್ಟಿನೆಂಟ್ ಪೀಟರ್ ವಿಲ್ಸನ್ ಪ್ರಭಾಕರ್, ಪೂರ್ವಾಧ್ಯಕ್ಷ ಪಶುಪತಿ ಶರ್ಮಾ, ನಿಯೋಜಿತ ಅಧ್ಯಕ್ಷ ಕುಸುಮಾರಾಜ್, ಸ್ಥಾಪಕಾಧ್ಯಕ್ಷ ರತ್ನಾಕರ್ ರೈ, arch klump society ಸದಸ್ಯ ವಿಶ್ವಾಸ್ ಶೆಣೈ, ಪೂರ್ವಾಧ್ಯಕ್ಷರಾದ ಚೇತನ್, ಉಮೇಶ್ ನಾಯಕ್ ಪುತ್ತೂರು, ನರಸಿಂಹ ಪೈ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124