ಕರಾವಳಿಸ್ಥಳೀಯ

ಸುಳ್ಯದಲ್ಲಿ ಬಸ್‌ ಬೈಕ್ ಅಪಘಾತ ಪ್ರಕರಣ: ಶಿಕ್ಷಕ ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ಪತ್ನಿ ಸುಳ್ಯ ಸಿ ಎ ಬ್ಯಾಂಕ್ ಸಿಬ್ಬಂದಿ ಚಂದ್ರಿಕಾ ಮಗಳು ಮನ್ವಿತ ರವರನ್ನು ಅಗಲಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 155