ಆ್ಯಸಿಡ್ ದಾಳಿ: ಕಡಬಕ್ಕೆ ಭೇಟಿ ನೀಡಿದ ಎಸ್ಪಿ ಏನಂದ್ರು??
ಕಡಬದಲ್ಲಿ ನಡೆದಿರುವ ಆ್ಯಸಿಡ್ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಎಸ್ಪಿ ರಿಷ್ಯಂತ್ ಅವರು ಕಡಬ ಪ.ಪೂ. ಕಾಲೇಜಿಗೆ ಭೇಟಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಮುಖ ಆರೋಪಿ, ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ. ವಿದ್ಯಾರ್ಥಿ ಅಬೀನ್ (23ವ) ಎಂಬಾತನನ್ನು ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿದ್ಯಾರ್ಥಿನಿಯೋರ್ವಳು ಗಂಭೀರ ಗಾಯಗೊಂಡಿದ್ದು, ಇನ್ನಿಬ್ಬರು ಸಣ್ಣ ಪುಟ್ಟ ಗಾಯಗೊಂಡಿದ್ದಾರೆ. ಮೂವರು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದ ಕಾರಣ ಕಾಲೇಜಿಗೆ ಬೇರೆ ಬೇರೆ ಕಾಲೇಜುಗಳಿಂದ ವಿದ್ಯಾರ್ಥಿಗಳು ಬಂದಿದ್ದು ಈತ ಕೂಡ ಕಾಲೇಜಿಗೆ ಸಮವಸ್ತ್ರದಲ್ಲಿ ಬಂದು ಕಾದು ಕುಳಿತ್ತಿದ್ದ. ಇದೇ ವೇಳೆ ಸಂತ್ರಸ್ತೆಯ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಆಕೆಯ ಪಕ್ಕದಲ್ಲೇ ಕುಳಿತಿದ್ದ ಇಬ್ಬರು ಸಹಪಾಠಿ ವಿದ್ಯಾರ್ಥಿನಿಯರೂ ಆ್ಯಸಿಡ್ ದಾಳಿಗೆ ಒಳಗಾಗಿದ್ದಾರೆ ಎಂದು ವಿವರಿಸಿದರು.
ಆರೋಪಿ ಕಾಲೇಜು ಸಮವಸ್ತ್ರದಲ್ಲಿದ್ದ ಕಾರಣ ಇತರರ ಕೈವಾಡ ಇರಬಹುದೇ ಎಂಬ ಪ್ರಶ್ನೆಗೆ, ತನಿಖೆಯಿಂದ ಬೆಳಕಿಗೆ ಬರಬೇಕಷ್ಟೇ ಎಂದುತ್ತರಿಸಿದರು.
ಯುವಕ ದೂರದ ಸಂಬಂಧಿಯಾಗಿದ್ದ ಸಂತ್ರಸ್ತೆಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ. ಆ್ಯಸಿಡ್ ದಾಳಿ ನಡೆಸಲು ಆರೋಪಿ ರಾತ್ರಿಯೇ ಕೇರಳದಿಂದ ಬಂದಿದ್ದ ಎಂದು ವಿವರಿಸಿದರು.
ಡಿ.ವೈ.ಎಸ್.ಪಿ. ಅರುಣ್ ನಾಗೇಗೌಡ, ಪುತ್ತೂರು ಉಪ ವಿಭಾಗಾಧಿಕಾರಿ ಜೊಬಿನ್ ಮಹಾಪಾತ್ರ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Related Posts
ಸಂಟ್ಯಾರ್: ಬೃಹತ್ ಮರ ಬಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತ!
ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು ಹೆದ್ದಾರಿ…
ಪುತ್ತೂರು: ಯುವತಿ ನಾಪತ್ತೆ!!
ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಮುಖಂಡರು ಮಗು ತೆಗೆಸಿ ಎಂದರೇ ಹೊರತು, ಮದುವೆ ಬಗ್ಗೆ ಮಾತನಾಡಲಿಲ್ಲ: ಸಂತ್ರಸ್ತೆ ತಾಯಿ | ನ್ಯಾಯಕ್ಕೆ ಆಗ್ರಹಿಸಿ ಹೋರಾಟಕ್ಕೆ ಮುಂದಾದ ಎಸ್.ಡಿ.ಪಿ.ಐ.
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ರಾಜಕೀಯ ಮುಖಂಡನ ಪುತ್ರನಿಂದ ವಂಚನೆ…
ಪುತ್ತೂರು: ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ|ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೊಕೇಶ್ ಹೆಗ್ಡೆ
2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ,…
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ನಗರದ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ spyss ಉಪ್ಪಿನಂಗಡಿ ನಗರದ…
ನಿವೃತ್ತ ಶಿಕ್ಷಕಿ ಗಂಗಾವತಿ ಅವರಿಗೆ ವಿದಾಯ ಕೂಟ, ಪೋಷಕರ ಸಭೆ
ಸದಾ ಕಾಲ ತನ್ನನ್ನು ತಾನು ಸೇವೆಗೆ ಮುಡಿಪಾಗಿಟ್ಟು ಇಲಾಖಾ ಕೆಲಸಗಳಲ್ಲಿಯೂ ತೊಡಗಿಸಿಕೊಂಡು…
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರು ಜೂನ್ 26…
ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…
ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ
ಪುತ್ತೂರ ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.
ವಿಜಯ ಸಾಮ್ರಾಟ್ ಆಶ್ರಯದಲ್ಲಿ ಸೆ. 27, 28ರಂದು ಪಿಲಿಗೊಬ್ಬು-2025 ಸೀಸನ್-3: ಪೂರ್ವಭಾವಿ ಸಭೆ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಪುತ್ತೂರು ಮಹಾತೋಭಾರ…