ಆ್ಯಸಿಡ್ ದಾಳಿ: ಕಡಬಕ್ಕೆ ಭೇಟಿ ನೀಡಿದ ಎಸ್ಪಿ ಏನಂದ್ರು??
0
2,611
ಕಡಬದಲ್ಲಿ ನಡೆದಿರುವ ಆ್ಯಸಿಡ್ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಎಸ್ಪಿ ರಿಷ್ಯಂತ್ ಅವರು ಕಡಬ ಪ.ಪೂ. ಕಾಲೇಜಿಗೆ ಭೇಟಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಮುಖ ಆರೋಪಿ, ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ. ವಿದ್ಯಾರ್ಥಿ ಅಬೀನ್ (23ವ) ಎಂಬಾತನನ್ನು ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿದ್ಯಾರ್ಥಿನಿಯೋರ್ವಳು ಗಂಭೀರ ಗಾಯಗೊಂಡಿದ್ದು, ಇನ್ನಿಬ್ಬರು ಸಣ್ಣ ಪುಟ್ಟ ಗಾಯಗೊಂಡಿದ್ದಾರೆ. ಮೂವರು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದ ಕಾರಣ ಕಾಲೇಜಿಗೆ ಬೇರೆ ಬೇರೆ ಕಾಲೇಜುಗಳಿಂದ ವಿದ್ಯಾರ್ಥಿಗಳು ಬಂದಿದ್ದು ಈತ ಕೂಡ ಕಾಲೇಜಿಗೆ ಸಮವಸ್ತ್ರದಲ್ಲಿ ಬಂದು ಕಾದು ಕುಳಿತ್ತಿದ್ದ. ಇದೇ ವೇಳೆ ಸಂತ್ರಸ್ತೆಯ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಆಕೆಯ ಪಕ್ಕದಲ್ಲೇ ಕುಳಿತಿದ್ದ ಇಬ್ಬರು ಸಹಪಾಠಿ ವಿದ್ಯಾರ್ಥಿನಿಯರೂ ಆ್ಯಸಿಡ್ ದಾಳಿಗೆ ಒಳಗಾಗಿದ್ದಾರೆ ಎಂದು ವಿವರಿಸಿದರು.
ಆರೋಪಿ ಕಾಲೇಜು ಸಮವಸ್ತ್ರದಲ್ಲಿದ್ದ ಕಾರಣ ಇತರರ ಕೈವಾಡ ಇರಬಹುದೇ ಎಂಬ ಪ್ರಶ್ನೆಗೆ, ತನಿಖೆಯಿಂದ ಬೆಳಕಿಗೆ ಬರಬೇಕಷ್ಟೇ ಎಂದುತ್ತರಿಸಿದರು.
ಯುವಕ ದೂರದ ಸಂಬಂಧಿಯಾಗಿದ್ದ ಸಂತ್ರಸ್ತೆಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ. ಆ್ಯಸಿಡ್ ದಾಳಿ ನಡೆಸಲು ಆರೋಪಿ ರಾತ್ರಿಯೇ ಕೇರಳದಿಂದ ಬಂದಿದ್ದ ಎಂದು ವಿವರಿಸಿದರು.
ಡಿ.ವೈ.ಎಸ್.ಪಿ. ಅರುಣ್ ನಾಗೇಗೌಡ, ಪುತ್ತೂರು ಉಪ ವಿಭಾಗಾಧಿಕಾರಿ ಜೊಬಿನ್ ಮಹಾಪಾತ್ರ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Related Posts
ಮಹಿಳಾ ವೈದ್ಯೆಯ ಮೇಲೆ ಹಲ್ಲೆಗೆ ಯತ್ನ: ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
ಪುತ್ತೂರು: ಮಹಿಳಾ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಸೂಕ್ತ ಕ್ರಮ…
ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!
ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಉದ್ಘಾಟಿಸಿದ ನಟ ರಮೇಶ್ ಅರವಿಂದ್
ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ…
12ನೇ ವರ್ಷಕ್ಕೆ ಪಾದಾರ್ಪಣೆಗೈದ ಡಾ. ನಝೀರ್ಸ್ ಡಯಾಬಿಟೀಕ್ ಸೆಂಟರ್ | ಉಚಿತ ತಪಾಸಣೆ, ವಿಶೇಷ ಉಪನ್ಯಾಸ
ಪ್ರಸಕ್ತ ಸಮಾಜದಲ್ಲಿ ಬಾಧಿಸುತ್ತಿರುವ ಅತೀ ದೊಡ್ಡ ಸಮಸ್ಯೆಗಳಲ್ಲಿ ಡಯಾಬಿಟೀಸ್ ಒಂದು. ಇದರಲ್ಲಿ…
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ‘ವರುಷದ ಹರುಷ’ ಶಾಪಿಂಗ್ ಹಬ್ಬ | ಗ್ರಾಹಕರಿಗೆ ಭರ್ಜರಿ ಕೊಡುಗೆಗಳು – ಸ್ಪೆಷಲ್ ಡಿಸ್ಕೌಂಟ್ಸ್!| ಜಿಲ್ಲೆಯಲ್ಲೇ ಅತ್ಯಧಿಕ, 25 ಸಾವಿರಕ್ಕೂ ಮಿಕ್ಕಿ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹ, ಅಭೂತಪೂರ್ವ ಸ್ಪಂದನೆ!!
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್, ತಮ್ಮ ವಾರ್ಷಿಕೋತ್ಸವದ ಸಂಭ್ರಮವನ್ನು 'ಜಿ.ಎಲ್.…
ಮಂಗಳೂರಿನಲ್ಲಿ ವಾಟರ್ ಮೆಟ್ರೊ ಯೋಜನೆ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ!!
ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ…
ಶ್ರೀಕೃಷ್ಣ ವಿದ್ಯಾಸಂಸ್ಥೆಯ ನೇತೃತ್ವ ವಹಿಸಿಕೊಂಡ ದ್ವಾರಕಾ ಪ್ರತಿಷ್ಠಾನ | 75ರ ಸಂಭ್ರಮಕ್ಕೆ ವರ್ಷವಿಡೀ ಕಾರ್ಯಕ್ರಮ, ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮವೂ ಆರಂಭ
75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ…
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ…
ಪುತ್ತೂರು ಜಾತ್ರೆ ಗದ್ದೆಯಲ್ಲಿ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು, ಪ್ರವೇಶ ದ್ವಾರ ಸಹಿತ ಹಲವೆಡೆ 44 ಸಿಸಿ ಕ್ಯಾಮರಾ
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ…
ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ
ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ