ಸ್ಥಳೀಯ

ಗೂಡ್ಸ್ ವಾಹನ – ಬೈಕ್ ಢಿಕ್ಕಿ: ವಿವೇಕಾನಂದ ಕಾಲೇಜು ವಿದ್ಯಾರ್ಥಿ ಶ್ರೀಜಿಸ್ ಮೃತ್ಯು!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.

core technologies

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20 ವ.)ಮೃತಪಟ್ಟ ದುರ್ದೈವಿ.

akshaya college

ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ (ಜೀತ್‌) ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ.

ಮೃತ ಶ್ರೀಜಿಸ್‌ರವರು ತಂದೆ , ತಾಯಿ, ಸಹೋದರರಾದ ಸುನೀಶ್‌ ಹಾಗೂ ಸುಜಿಸ್‌ರವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118