Gl harusha
ಸ್ಥಳೀಯ

ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!

ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿಯವರು ಎ.24ರಂದು ನೀಡಿದ್ದ ಆದೇಶಕ್ಕೆ ಎ.25ರಂದು ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿಯವರು ಎ.24ರಂದು ನೀಡಿದ್ದ ಆದೇಶಕ್ಕೆ ಎ.25ರಂದು ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

srk ladders
Pashupathi

ಹೈಕೋರ್ಟ್‌ನಲ್ಲಿ ಅರ್ಜಿದಾರರ ಪರ ವಕೀಲರಾದ ಅರುಣ್‌ ಶ್ಯಾಮ್ ಪುತ್ತೂರು ಮತ್ತು ಸುಯೋಗ್ ಹೇರಳೆ ಪುತ್ತೂರು ವಾದಿಸಿದ್ದರು.

ಹೈಕೋರ್ಟ್‌ ಆದೇಶದ ಹಿನ್ನೆಲೆ:

ವ್ಯವಸ್ಥಾಪನಾ ಸಮಿತಿ ರಚಿಸಿ ಈ ಹಿಂದೆ ಹೊರಡಿಸಲಾಗಿದ್ದ ಆದೇಶವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ರದ್ದುಪಡಿಸಿ ಮರು ಪ್ರಕಟಣೆ ಹೊರಡಿಸಲು ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯಲ್ಲಿ ನಿರ್ಣಯಿಸಲಾಗಿದ್ದು ಅದರಂತೆ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಕಾರ್ಯದರ್ಶಿಯವರು ಏ.24ರಂದು ಆದೇಶ ಹೊರಡಿಸಿದ್ದಾರೆ. ಈ ಆದೇಶಕ್ಕೆ ಹೈಕೋರ್ಟ್ ಎ.25ರಂದು ತಡೆಯಾಜ್ಞೆ ನೀಡಿದೆ.

ಪ್ರವರ್ಗ ಬಿ’ಗೆ ಸೇರಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಓರ್ವ ಪ್ರಧಾನ ಅರ್ಚಕರ ಸಹಿತ ಒಂಭತ್ತು ಮಂದಿ ಸದಸ್ಯರನ್ನು ನೇಮಕಗೊಳಿಸಿ ಜ. 9ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ 6 ಪರಿಷತ್‌ನ ಸದಸ್ಯ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದರು. ಅಲ್ಲದೆ, ಒಂದು ವಾರದ ಒಳಗಾಗಿ ಸದಸ್ಯರ ಸಭೆ ನಡೆಸಿ ಸಮಿತಿ ಅಧ್ಯಕ್ಷರ ಆಯ್ಕೆ ಮಾಡಿ ನಿರ್ಣಯದ ಪ್ರಸ್ತಾವನೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿತ್ತು.

ಸಮಿತಿ ಸದಸ್ಯರ ನೇಮಕವಾಗಿ ಮೂರು ತಿಂಗಳು ಕಳೆದರೂ ವ್ಯವಸ್ಥಾಪನಾ ಸಮಿತಿಗೆ ಅಧ್ಯಕ್ಷರ ಆಯ್ಕೆ ಆಗಿರಲಿಲ್ಲ. ವ್ಯವಸ್ಥಾಪನಾ ಸಮಿತಿಗೆ ವಾರದೊಳಗೆ ಅಧ್ಯಕ್ಷರ ಆಯ್ಕೆ ಮಾಡಿ ನಿರ್ಣಯದ ಪ್ರಸ್ತಾವನೆಯನ್ನು ಇಲಾಖೆಗೆ ಸಲ್ಲಿಸುವಂತೆ ವ್ಯವಸ್ಥಾಪನಾ ಸಮಿತಿ ರಚಿಸಿ ಆದೇಶ ಹೊರಡಿಸಿದ್ದ ಸಹಾಯಕ ರು ಆದೇಶದಲ್ಲಿ ಸೂಚಿಸಿದ್ದರು. ಆದರೆ, ಸದಸ್ಯರಲ್ಲಿ ಅಧ್ಯಕ್ಷರ ಆಯ್ಕೆ ನಡೆಯದೇ ಇರುವುದರಿಂದ ಜಿಲ್ಲಾ ಧಾರ್ಮಿಕ ಪರಿಷತ್‌ ಸಭೆಯಲ್ಲಿ ಸದ್ರಿ ವ್ಯವಸ್ಥಾಪನಾ ಸಮಿತಿಯನ್ನು ರದ್ದುಪಡಿಸಿ ಮರುಪ್ರಕಟಣೆ ಹೊರಡಿಸಲು ನಿರ್ಣಯಿಸಲಾಗಿರುತ್ತದೆ. ಅದರಂತೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಹೊರಡಿಸಿರುವ ಆದೇಶವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಕಾರ್ಯದರ್ಶಿಯವರು ಆದೇಶದಲ್ಲಿ ತಿಳಿಸಿದ್ದರು.

ಇಲಾಖೆಯ ಆದೇಶದಂತೆ ದೈವಸ್ಥಾನದ ಪ್ರಧಾನ ಅರ್ಚಕ ರವಿಚಂದ್ರ ನೆಲ್ಲಿತ್ತಾಯ, ಪ.ಜಾತಿ ಮತ್ತು ಪ.ಪಂಗಡದಿಂದ ಸತೀಶ್ ನಾಯ್ಕ ಕಾನದಗುರಿ, ಮಹಿಳಾ ಮೀಸಲು ಸ್ಥಾನದಿಂದ ಪ್ರಮೀಳಾ ಬ್ರಹ್ಮರಕೋಡಿ, ಲಲಿತಾ ಪದವು, ಸಾಮಾನ್ಯ ಸ್ಥಾನದಿಂದ ವೆಂಕಟಕೃಷ್ಣ ಪಾಲೆಚ್ಚಾರು, ನವೀನ ಕರ್ಕೇರ ರಾಂಬೈಲು, ನಾರಾಯಣ ಗೌಡ ಕುಕ್ಕುತ್ತಡಿ, ಸತೀಶ ಒಳಗುಡ್ಡೆ ಹಾಗೂ ವಾಸುದೇವ ನಾಯ್ಕರವರನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ನೇಮಕಗೊಳಿಸಿ ಆದೇಶಿಸಲಾಗಿತ್ತು. ಜಿಲ್ಲಾ ಧಾರ್ಮಿಕ ಪರಿಷತ್‌ನಿಂದ ನೇಮಕಗೊಂಡಿರುವ ಎಂಟು ಮಂದಿ ಸದಸ್ಯರಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇಬ್ಬರೊಳಗೆ ತೀವ್ರ ಪೈಪೋಟಿಯಿದ್ದುದರಿಂದ ಅಧ್ಯಕ್ಷರ ಆಯ್ಕೆಗೆ ಸದಸ್ಯರಲ್ಲಿ ಒಮ್ಮತ ಮೂಡಿರಲಿಲ್ಲ. ಇದು ಶಾಸಕರ ಗಮನಕ್ಕೆ ಬಂದು ಅವರು ಸಭೆ ನಡೆಸಿದ್ದರೂ ಅಲ್ಲಿಯೂ ಅಧ್ಯಕ್ಷರ ಆಯ್ಕೆಗೆ 2.ನು ತ ಮೂಡಿರಲಿಲ್ಲ. ಇದರಿಂದಾಗಿ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ ಕಗ್ಗಂಟಾಗಿಯೇ ಉಳಿದಿತ್ತು. ಇದೀಗ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ