ಪುತ್ತೂರು: 75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಟ್ಟೆ ನರಸಿಂಹ ಭಟ್ ಮತ್ತು ಬಾಲಕೃಷ್ಣ ಭಟ್ ಎಂಬವರ ನೇತೃತ್ವದಲ್ಲಿ ಮುನ್ನಡೆದುಕೊಂಡು ಬಂದಿರುವ ಶ್ರೀಕೃಷ್ಣ ವಿದ್ಯಾಸಂಸ್ಥೆಯು, ಸ್ಥಳೀಯ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುವ ಮೂಲಕ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದೀಗ ದ್ವಾರಕಾ ಪ್ರತಿಷ್ಠಾನವು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳನ್ನು ನಡೆಸಲು ಮುಂದಾಗಿದ್ದು, ಸುಸಂಸ್ಕೃತ ಸಮಾಜ ಕಟ್ಟುವ ನಿಟ್ಟಿನಲ್ಲಿ ಶಿಕ್ಷಣ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.
ಕೇವಲ ಸರ್ಟಿಫಿಕೇಟ್ ಪಡೆಯುವುದು ಶಿಕ್ಷಣವಲ್ಲ. ಶಿಕ್ಷಣದ ಮೂಲಕ ಮಕ್ಕಳು ಸಮಾಜಕ್ಕೆ ಆಸ್ತಿಯಾಗಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಕೊಡಬೇಕೆನ್ನುವ ಕನಸಿನೊಂದಿಗೆ ಈಗಿನ ಹೊಸ ಆಡಳಿತದೊಂದಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣ ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹಲವು ಯೋಜನೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕವಾಗಿ ಕೆ.ಜಿ. ಶಿಕ್ಷಣದಿಂದಲೇ ಆಂಗ್ಲ ಮಾಧ್ಯಮವನ್ನು ಆರಂಭಿಸಲಿದ್ದೇವೆ. ಹಾಲಿ ವಿದ್ಯಾಸಂಸ್ಥೆಯಲ್ಲಿ 274 ವಿದ್ಯಾರ್ಥಿಗಳಿದ್ದು, ಇದೀಗ ಈ ಶೈಕ್ಷಣಿಕ ವರ್ಷದಲ್ಲಿ 50 ರಿಂದ 100 ವಿದ್ಯಾರ್ಥಿಗಳು ಹೆಚ್ಚು ಸೇರ್ಪಡೆಗೊಂಡಿದ್ದಾರೆ. 75 ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ವರ್ಷವಿಡೀ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಿದ್ದೇವೆ ಎಂದರು.
ಸದ್ಯಕ್ಕೆ ನಿಂತಿರುವ ಪಿಯು ಶಿಕ್ಷಣವನ್ನು ಮುಂದಿನ ಎರಡು ವರ್ಷಗಳಲ್ಲಿ ಪುನರಾರಂಭಿಸಲಿದ್ದೇವೆ. ಮುಂದಿನ ಮಳೆಗಾಲದ ಸಂದರ್ಭದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಗೋಪಾಲಕೃಷ್ಣ ಭಟ್ ಹೇಳಿದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ವಿಘ್ನೇಶ್ ಮಾತನಾಡಿ, ಸುಸಂಸ್ಕೃತ, ಸಮಾಜದ ಜವಾಬ್ದಾರಿಯ ವಿದ್ಯಾರ್ಥಿಗಳನ್ನು ಅಲ್ಲಿ ಬೆಳೆಸಬೇಕೆಂಬ ಮುಖ್ಯ ಉದ್ದೇಶದಿಂದ ದ್ವಾರಕಾ ಪ್ರತಿಷ್ಠಾನವು ಈ ಸಂಸ್ಥೆಯ ನೇತೃತ್ವವನ್ನು ವಹಿಸಿಕೊಂಡಿದೆ. ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ, ಮೌಲ್ಯವರ್ಧನ ಶಿಕ್ಷಣ ಮತ್ತು ಸಾಂಪ್ರಾದಾಯಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕಬೇಕೆನ್ನುವುದು ನಮ್ಮ ಮಹದಾಸೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಳಿಗೆ ಗುರುಕುಲ ಮಾದರಿಯ ಶಿಕ್ಷಣ, ಕೃಷಿಗೆ ಸಂಬಂಧಿಸಿದ ಚಟುವಟಿಕೆ ಸಹಿತ ವಿದ್ಯಾರ್ಥಿಗಳ ಜೀವನ ಶೈಲಿಯ ಬದಲಾವಣೆಯ ಶಿಕ್ಷಣ ನೀಡಲಿದ್ದೇವೆ ಎಂದರು.
ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಅಮೃತಕೃಷ್ಣ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.
ದ್ವಾರಕಾ ಕಾರ್ಪೋರೇಶನ್ ಪ್ರೈ.ಲಿ. ಇದರ ಕಾರ್ಪೋರೇಶನ್ ವಿಭಾಗದ ಮುಖ್ಯಸ್ಥ ದುರ್ಗಾ ಗಣೇಶ್ ಉಪಸ್ಥಿತರಿದ್ದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ನೇತೃತ್ವ ವಹಿಸಿಕೊಂಡ ದ್ವಾರಕಾ ಪ್ರತಿಷ್ಠಾನ | 75ರ ಸಂಭ್ರಮಕ್ಕೆ ವರ್ಷವಿಡೀ ಕಾರ್ಯಕ್ರಮ, ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮವೂ ಆರಂಭ
What's your reaction?
- 694c
- 694cc
- 6ai technology
- 5alwas
- 5apology
- 5artificial intelegence
- 5avg
- 5bihar minister
- 5bjp
- 5bjp leader
- 5bjp national president
- 5bt ranjan
- 5co-operative
- 4coastal
- 4crime news
- 4darmasthala
- 4death news
- 4dust bin
- 4education
- 4gl
- 4gods own country
- 4google for education
- 4independence
- 3jewel
- 3jewellers
- 3jnana vikasa
- 3karnataka state
- 3kerala village
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2ptr tahasildar
- 2puttur
- 2puttur news
- 2puttur tahasildar
- 2republic
- 1revenue
- 1revenue department
- 1revenue minister
- 1school
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಕಲ್ಲರ್ಪೆ: ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ರಾಷ್ಟ್ರಪಕ್ಷಿ!!
ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.…
ಆರ್ಯಾಪು -ಕುರಿಯ ಗ್ರಾಮಸ್ಥರಿಗೆ ಅಶೋಕಜನಮನ ಉಡುಗೋರೆ ವಿತರಣೆ | ಶಕ್ತಿ ಇರುವ ತನಕ ಬಡವರ ಸೇವೆ ಮಾಡುವೆ; ಚುನಾವಣಾ ಸಮಯದಲ್ಲಿ ಆಶೀರ್ವಾದ ಮಾಡಿ: ಅಶೋಕ್ ರೈ
ಪುತ್ತೂರು: ನನ್ನಲ್ಲಿ ಶಕ್ತಿ ಇರುವ ತನಕ ನಾನು ಬಡವರ ಸೇವೆಯನ್ನು ಮಾಡುತ್ತಲೇ ಇರುವೆ, ನಾನು…
ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ
ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ…
ಅಶೋಕ ಜನಮನದಲ್ಲಿ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…
ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…
ಬ್ಯಾನರಿಗೆ ಹಾನಿ: ಬಲ್ನಾಡು ದೈವಸ್ಥಾನದಲ್ಲಿ ಪ್ರಾರ್ಥನೆ
ಪುತ್ತೂರು: ಬ್ಯಾನರಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಶನಿವಾರ ಸೀಯಾಳ…
ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!
ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ತಾಲೂಕು ಗಣರಾಜ್ಯೋತ್ಸವ ಪ್ರಶಸ್ತಿ: ಉಮೇಶ್ ನಾಯಕ್, ಭಾಗ್ಯೇಶ ರೈ ಆಯ್ಕೆ
ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ತಾಲೂಕು ಆಡಳಿತ ವತಿಯಿಂದ ನಡೆಯುವ ತಾಲೂಕು ಮಟ್ಟದ…
ಪುತ್ತೂರು: ಕಂಬಳದ ಜೊತೆ ಕೆಸರುಗದ್ದೆ ಓಟದ ಸ್ಪರ್ಧೆ | ಮಾ. 1: ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಐತಿಹಾಸಿಕ ಕೋಟಿ – ಚೆನ್ನಯ ಕಂಬಳ
ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ…






















