ಪುತ್ತೂರು: 75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಟ್ಟೆ ನರಸಿಂಹ ಭಟ್ ಮತ್ತು ಬಾಲಕೃಷ್ಣ ಭಟ್ ಎಂಬವರ ನೇತೃತ್ವದಲ್ಲಿ ಮುನ್ನಡೆದುಕೊಂಡು ಬಂದಿರುವ ಶ್ರೀಕೃಷ್ಣ ವಿದ್ಯಾಸಂಸ್ಥೆಯು, ಸ್ಥಳೀಯ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುವ ಮೂಲಕ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದೀಗ ದ್ವಾರಕಾ ಪ್ರತಿಷ್ಠಾನವು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳನ್ನು ನಡೆಸಲು ಮುಂದಾಗಿದ್ದು, ಸುಸಂಸ್ಕೃತ ಸಮಾಜ ಕಟ್ಟುವ ನಿಟ್ಟಿನಲ್ಲಿ ಶಿಕ್ಷಣ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.
ಕೇವಲ ಸರ್ಟಿಫಿಕೇಟ್ ಪಡೆಯುವುದು ಶಿಕ್ಷಣವಲ್ಲ. ಶಿಕ್ಷಣದ ಮೂಲಕ ಮಕ್ಕಳು ಸಮಾಜಕ್ಕೆ ಆಸ್ತಿಯಾಗಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಕೊಡಬೇಕೆನ್ನುವ ಕನಸಿನೊಂದಿಗೆ ಈಗಿನ ಹೊಸ ಆಡಳಿತದೊಂದಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣ ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹಲವು ಯೋಜನೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕವಾಗಿ ಕೆ.ಜಿ. ಶಿಕ್ಷಣದಿಂದಲೇ ಆಂಗ್ಲ ಮಾಧ್ಯಮವನ್ನು ಆರಂಭಿಸಲಿದ್ದೇವೆ. ಹಾಲಿ ವಿದ್ಯಾಸಂಸ್ಥೆಯಲ್ಲಿ 274 ವಿದ್ಯಾರ್ಥಿಗಳಿದ್ದು, ಇದೀಗ ಈ ಶೈಕ್ಷಣಿಕ ವರ್ಷದಲ್ಲಿ 50 ರಿಂದ 100 ವಿದ್ಯಾರ್ಥಿಗಳು ಹೆಚ್ಚು ಸೇರ್ಪಡೆಗೊಂಡಿದ್ದಾರೆ. 75 ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ವರ್ಷವಿಡೀ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಿದ್ದೇವೆ ಎಂದರು.
ಸದ್ಯಕ್ಕೆ ನಿಂತಿರುವ ಪಿಯು ಶಿಕ್ಷಣವನ್ನು ಮುಂದಿನ ಎರಡು ವರ್ಷಗಳಲ್ಲಿ ಪುನರಾರಂಭಿಸಲಿದ್ದೇವೆ. ಮುಂದಿನ ಮಳೆಗಾಲದ ಸಂದರ್ಭದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಗೋಪಾಲಕೃಷ್ಣ ಭಟ್ ಹೇಳಿದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ವಿಘ್ನೇಶ್ ಮಾತನಾಡಿ, ಸುಸಂಸ್ಕೃತ, ಸಮಾಜದ ಜವಾಬ್ದಾರಿಯ ವಿದ್ಯಾರ್ಥಿಗಳನ್ನು ಅಲ್ಲಿ ಬೆಳೆಸಬೇಕೆಂಬ ಮುಖ್ಯ ಉದ್ದೇಶದಿಂದ ದ್ವಾರಕಾ ಪ್ರತಿಷ್ಠಾನವು ಈ ಸಂಸ್ಥೆಯ ನೇತೃತ್ವವನ್ನು ವಹಿಸಿಕೊಂಡಿದೆ. ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ, ಮೌಲ್ಯವರ್ಧನ ಶಿಕ್ಷಣ ಮತ್ತು ಸಾಂಪ್ರಾದಾಯಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕಬೇಕೆನ್ನುವುದು ನಮ್ಮ ಮಹದಾಸೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಳಿಗೆ ಗುರುಕುಲ ಮಾದರಿಯ ಶಿಕ್ಷಣ, ಕೃಷಿಗೆ ಸಂಬಂಧಿಸಿದ ಚಟುವಟಿಕೆ ಸಹಿತ ವಿದ್ಯಾರ್ಥಿಗಳ ಜೀವನ ಶೈಲಿಯ ಬದಲಾವಣೆಯ ಶಿಕ್ಷಣ ನೀಡಲಿದ್ದೇವೆ ಎಂದರು.
ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಅಮೃತಕೃಷ್ಣ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.
ದ್ವಾರಕಾ ಕಾರ್ಪೋರೇಶನ್ ಪ್ರೈ.ಲಿ. ಇದರ ಕಾರ್ಪೋರೇಶನ್ ವಿಭಾಗದ ಮುಖ್ಯಸ್ಥ ದುರ್ಗಾ ಗಣೇಶ್ ಉಪಸ್ಥಿತರಿದ್ದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ನೇತೃತ್ವ ವಹಿಸಿಕೊಂಡ ದ್ವಾರಕಾ ಪ್ರತಿಷ್ಠಾನ | 75ರ ಸಂಭ್ರಮಕ್ಕೆ ವರ್ಷವಿಡೀ ಕಾರ್ಯಕ್ರಮ, ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮವೂ ಆರಂಭ
What's your reaction?
- 394c
- 394cc
- 3ai technology
- 3artificial intelegence
- 3avg
- 2bt ranjan
- 2co-operative
- 2crime news
- 2death news
- 2gl
- 2google for education
- 2independence
- 2jewellers
- 2karnataka state
- 2lokayuktha
- 2lokayuktha raid
- 1manipal
- 1minister krishna bairegowda
- 1mla ashok rai
- 1nidana news
- 1ptr tahasildar
- 1puttur
- 1puttur news
- 1puttur tahasildar
- 1revenue
- 1revenue department
- 1revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
ಸಮೀಕ್ಷೆಗೆ ಮಾಹಿತಿ ನೀಡದವರಿಗೆ ಸರಕಾರಿ ಸೌಲಭ್ಯ ಬೇಡ: ಮಹಮ್ಮದ್ ಆಲಿ
ಪುತ್ತೂರು: ಬಿಜೆಪಿಯ ಒತ್ತಾಸೆಗೆ ಬೇಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ…
ನಕಲಿ ಹಿಂದುತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ | `ಅಂಬೇಡ್ಕರ್ ವಾದದ ಆಚರಣೆ’ ಪುಸ್ತಕ ಬಿಡುಗಡೆ, ಲೇಖಕರೊಂದಿಗೆ ಸಂವಾದದಲ್ಲಿ ಪ್ರೊ. ಲಕ್ಷ್ಮೀಪತಿ
ಪುತ್ತೂರು: ಬುದ್ಧಿವಂತರ ಜಿಲ್ಲೆಯ ಜನರನ್ನು ದಡ್ಡರನ್ನಾಗಿಸುವ ಕೆಲಸ ನಡೆಯುತ್ತಿದೆ. ದೇಶಾಭಿಮಾನದ…
ಕೃಷ್ಣ – ಕುಚೇಲನಂತಿರಲಿ ಬ್ಯಾಂಕ್ – ಗ್ರಾಹಕನ ಸಂಬಂಧ | ಎಸ್.ಕೆ.ಜಿ.ಐ. ಸೊಸೈಟಿಯ ಪುತ್ತೂರು ಶಾಖಾ ಸದಸ್ಯ ಗ್ರಾಹಕರ ಸಮಾವೇಶದಲ್ಲಿ ಚಿದಾನಂದ ಬೈಲಾಡಿ
ಪುತ್ತೂರು: ಎಸ್.ಕೆ. ಗೋಲ್ಡ್'ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ…
ಲವ್, ಸೆಕ್ಸ್ ಪ್ರಕರಣ: ಕೈಸೇರಿದ ಡಿ.ಎನ್.ಎ. ಟೆಸ್ಟ್!! ಮಗುವಿನ ಅಪ್ಪ ಯಾರೆಂಬ ಸತ್ಯ ಬಯಲಿಗೆ!!
ಪುತ್ತೂರು: ಡಿ.ಎನ್.ಎ. ಟೆಸ್ಟ್ ಕೈಸೇರಿದೆ. ಮಗುವಿನ ತಂದೆ ಯಾರೆಂಬ ಪ್ರಶ್ನೆಗೆ ಉತ್ತರ…
ಮಾದಕ ವ್ಯಸನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಿ | ಯುವಕ ಮಂಡಲಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಕರೆ
ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ…
ಸೆ. 27: ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ |ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ
ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ…
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾನ ಮಂಜೂರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು…
ಜಿ.ಎಲ್. ಆಚಾರ್ಯ ಶತಮಾನೋತ್ಸವ – ಆಚಾರ್ಯ ಕವಿಗೋಷ್ಠಿ | ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥ ಮಾಡಿಕೊಳ್ಳಬೇಕು: ಪ್ರೊ. ವಿ.ಬಿ. ಅರ್ತಿಕಜೆ
ಪುತ್ತೂರು: ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ…
ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…
ಕೊಕ್ರಾಡಿ: ಬೋನಿಗೆ ಬಿದ್ದ ಚಿರತೆ!!
ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿಕೆ ಇವರ…