ಪುತ್ತೂರು: 75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಟ್ಟೆ ನರಸಿಂಹ ಭಟ್ ಮತ್ತು ಬಾಲಕೃಷ್ಣ ಭಟ್ ಎಂಬವರ ನೇತೃತ್ವದಲ್ಲಿ ಮುನ್ನಡೆದುಕೊಂಡು ಬಂದಿರುವ ಶ್ರೀಕೃಷ್ಣ ವಿದ್ಯಾಸಂಸ್ಥೆಯು, ಸ್ಥಳೀಯ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುವ ಮೂಲಕ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದೀಗ ದ್ವಾರಕಾ ಪ್ರತಿಷ್ಠಾನವು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳನ್ನು ನಡೆಸಲು ಮುಂದಾಗಿದ್ದು, ಸುಸಂಸ್ಕೃತ ಸಮಾಜ ಕಟ್ಟುವ ನಿಟ್ಟಿನಲ್ಲಿ ಶಿಕ್ಷಣ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.
ಕೇವಲ ಸರ್ಟಿಫಿಕೇಟ್ ಪಡೆಯುವುದು ಶಿಕ್ಷಣವಲ್ಲ. ಶಿಕ್ಷಣದ ಮೂಲಕ ಮಕ್ಕಳು ಸಮಾಜಕ್ಕೆ ಆಸ್ತಿಯಾಗಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಕೊಡಬೇಕೆನ್ನುವ ಕನಸಿನೊಂದಿಗೆ ಈಗಿನ ಹೊಸ ಆಡಳಿತದೊಂದಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣ ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹಲವು ಯೋಜನೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕವಾಗಿ ಕೆ.ಜಿ. ಶಿಕ್ಷಣದಿಂದಲೇ ಆಂಗ್ಲ ಮಾಧ್ಯಮವನ್ನು ಆರಂಭಿಸಲಿದ್ದೇವೆ. ಹಾಲಿ ವಿದ್ಯಾಸಂಸ್ಥೆಯಲ್ಲಿ 274 ವಿದ್ಯಾರ್ಥಿಗಳಿದ್ದು, ಇದೀಗ ಈ ಶೈಕ್ಷಣಿಕ ವರ್ಷದಲ್ಲಿ 50 ರಿಂದ 100 ವಿದ್ಯಾರ್ಥಿಗಳು ಹೆಚ್ಚು ಸೇರ್ಪಡೆಗೊಂಡಿದ್ದಾರೆ. 75 ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ವರ್ಷವಿಡೀ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಿದ್ದೇವೆ ಎಂದರು.
ಸದ್ಯಕ್ಕೆ ನಿಂತಿರುವ ಪಿಯು ಶಿಕ್ಷಣವನ್ನು ಮುಂದಿನ ಎರಡು ವರ್ಷಗಳಲ್ಲಿ ಪುನರಾರಂಭಿಸಲಿದ್ದೇವೆ. ಮುಂದಿನ ಮಳೆಗಾಲದ ಸಂದರ್ಭದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಗೋಪಾಲಕೃಷ್ಣ ಭಟ್ ಹೇಳಿದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ವಿಘ್ನೇಶ್ ಮಾತನಾಡಿ, ಸುಸಂಸ್ಕೃತ, ಸಮಾಜದ ಜವಾಬ್ದಾರಿಯ ವಿದ್ಯಾರ್ಥಿಗಳನ್ನು ಅಲ್ಲಿ ಬೆಳೆಸಬೇಕೆಂಬ ಮುಖ್ಯ ಉದ್ದೇಶದಿಂದ ದ್ವಾರಕಾ ಪ್ರತಿಷ್ಠಾನವು ಈ ಸಂಸ್ಥೆಯ ನೇತೃತ್ವವನ್ನು ವಹಿಸಿಕೊಂಡಿದೆ. ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ, ಮೌಲ್ಯವರ್ಧನ ಶಿಕ್ಷಣ ಮತ್ತು ಸಾಂಪ್ರಾದಾಯಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕಬೇಕೆನ್ನುವುದು ನಮ್ಮ ಮಹದಾಸೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಳಿಗೆ ಗುರುಕುಲ ಮಾದರಿಯ ಶಿಕ್ಷಣ, ಕೃಷಿಗೆ ಸಂಬಂಧಿಸಿದ ಚಟುವಟಿಕೆ ಸಹಿತ ವಿದ್ಯಾರ್ಥಿಗಳ ಜೀವನ ಶೈಲಿಯ ಬದಲಾವಣೆಯ ಶಿಕ್ಷಣ ನೀಡಲಿದ್ದೇವೆ ಎಂದರು.
ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಅಮೃತಕೃಷ್ಣ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.
ದ್ವಾರಕಾ ಕಾರ್ಪೋರೇಶನ್ ಪ್ರೈ.ಲಿ. ಇದರ ಕಾರ್ಪೋರೇಶನ್ ವಿಭಾಗದ ಮುಖ್ಯಸ್ಥ ದುರ್ಗಾ ಗಣೇಶ್ ಉಪಸ್ಥಿತರಿದ್ದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ನೇತೃತ್ವ ವಹಿಸಿಕೊಂಡ ದ್ವಾರಕಾ ಪ್ರತಿಷ್ಠಾನ | 75ರ ಸಂಭ್ರಮಕ್ಕೆ ವರ್ಷವಿಡೀ ಕಾರ್ಯಕ್ರಮ, ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮವೂ ಆರಂಭ
What's your reaction?
- 794c
- 794cc
- 6ai technology
- 6ajjavara
- 6alwas
- 6apology
- 6artificial intelegence
- 6avg
- 6bihar minister
- 6bjp
- 6bjp leader
- 6bjp national president
- 5bt ranjan
- 5co-operative
- 5coastal
- 5crime
- 5crime news
- 5cyclothon
- 5darmasthala
- 5death news
- 5dust bin
- 5education
- 4fraud
- 4gl
- 4gods own country
- 4gold
- 4google for education
- 4independence
- 4jewel
- 4jewellers
- 4jnana vikasa
- 4karnataka state
- 3kerala village
- 3kukke - kollur temple
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ನೇತ್ರಾವತಿ ತೀರದಲ್ಲಿ ತೇಲಿದ ಆಧಾರ್ ಕಾರ್ಡ್ಗಳು: ಬಂಟ್ವಾಳದಲ್ಲಿ ಭಾರೀ ಸಂಚಲನ!!
ಬಂಟ್ವಾಳ:ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ…
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…
ಡಾ. ಯದುರಾಜ್, ಡಾ. ಜೈನಾಬ ಸುನು ಆಲಿ, ಡಾ. ಅಜಯ್ ಅವರಿಗೆ ಸನ್ಮಾನ | ವಿಶೇಷ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರಿಂದ ಗೌರವ
ಪುತ್ತೂರು ಹಾಗೂ ಕಡಬ ತಾಲೂಕು ವಿಕಲ ಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ…
ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್.ಡಿ. ದೇವೇಗೌಡ ಭೇಟಿ – ವಿಶೇಷ ಪೂಜೆ
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡ ಅವರು ಮಾರ್ಚ್…
ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು…
ಪುತ್ತೂರಿಗೆ ಆಗಮಿಸಿದ ಪ್ರಧಾನಿ ಸಹೋದರ;ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗಿ
ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ , ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ…
ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ: ಅಜ್ಜಾವರ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್
ಸುಳ್ಯ,:ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ದೀರ್ಘಕಾಲದ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸುಳ್ಯ…





















