ಪುತ್ತೂರು: 75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಟ್ಟೆ ನರಸಿಂಹ ಭಟ್ ಮತ್ತು ಬಾಲಕೃಷ್ಣ ಭಟ್ ಎಂಬವರ ನೇತೃತ್ವದಲ್ಲಿ ಮುನ್ನಡೆದುಕೊಂಡು ಬಂದಿರುವ ಶ್ರೀಕೃಷ್ಣ ವಿದ್ಯಾಸಂಸ್ಥೆಯು, ಸ್ಥಳೀಯ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುವ ಮೂಲಕ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದೀಗ ದ್ವಾರಕಾ ಪ್ರತಿಷ್ಠಾನವು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳನ್ನು ನಡೆಸಲು ಮುಂದಾಗಿದ್ದು, ಸುಸಂಸ್ಕೃತ ಸಮಾಜ ಕಟ್ಟುವ ನಿಟ್ಟಿನಲ್ಲಿ ಶಿಕ್ಷಣ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.
ಕೇವಲ ಸರ್ಟಿಫಿಕೇಟ್ ಪಡೆಯುವುದು ಶಿಕ್ಷಣವಲ್ಲ. ಶಿಕ್ಷಣದ ಮೂಲಕ ಮಕ್ಕಳು ಸಮಾಜಕ್ಕೆ ಆಸ್ತಿಯಾಗಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಕೊಡಬೇಕೆನ್ನುವ ಕನಸಿನೊಂದಿಗೆ ಈಗಿನ ಹೊಸ ಆಡಳಿತದೊಂದಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣ ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹಲವು ಯೋಜನೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕವಾಗಿ ಕೆ.ಜಿ. ಶಿಕ್ಷಣದಿಂದಲೇ ಆಂಗ್ಲ ಮಾಧ್ಯಮವನ್ನು ಆರಂಭಿಸಲಿದ್ದೇವೆ. ಹಾಲಿ ವಿದ್ಯಾಸಂಸ್ಥೆಯಲ್ಲಿ 274 ವಿದ್ಯಾರ್ಥಿಗಳಿದ್ದು, ಇದೀಗ ಈ ಶೈಕ್ಷಣಿಕ ವರ್ಷದಲ್ಲಿ 50 ರಿಂದ 100 ವಿದ್ಯಾರ್ಥಿಗಳು ಹೆಚ್ಚು ಸೇರ್ಪಡೆಗೊಂಡಿದ್ದಾರೆ. 75 ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ವರ್ಷವಿಡೀ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಿದ್ದೇವೆ ಎಂದರು.
ಸದ್ಯಕ್ಕೆ ನಿಂತಿರುವ ಪಿಯು ಶಿಕ್ಷಣವನ್ನು ಮುಂದಿನ ಎರಡು ವರ್ಷಗಳಲ್ಲಿ ಪುನರಾರಂಭಿಸಲಿದ್ದೇವೆ. ಮುಂದಿನ ಮಳೆಗಾಲದ ಸಂದರ್ಭದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಗೋಪಾಲಕೃಷ್ಣ ಭಟ್ ಹೇಳಿದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ವಿಘ್ನೇಶ್ ಮಾತನಾಡಿ, ಸುಸಂಸ್ಕೃತ, ಸಮಾಜದ ಜವಾಬ್ದಾರಿಯ ವಿದ್ಯಾರ್ಥಿಗಳನ್ನು ಅಲ್ಲಿ ಬೆಳೆಸಬೇಕೆಂಬ ಮುಖ್ಯ ಉದ್ದೇಶದಿಂದ ದ್ವಾರಕಾ ಪ್ರತಿಷ್ಠಾನವು ಈ ಸಂಸ್ಥೆಯ ನೇತೃತ್ವವನ್ನು ವಹಿಸಿಕೊಂಡಿದೆ. ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ, ಮೌಲ್ಯವರ್ಧನ ಶಿಕ್ಷಣ ಮತ್ತು ಸಾಂಪ್ರಾದಾಯಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕಬೇಕೆನ್ನುವುದು ನಮ್ಮ ಮಹದಾಸೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಳಿಗೆ ಗುರುಕುಲ ಮಾದರಿಯ ಶಿಕ್ಷಣ, ಕೃಷಿಗೆ ಸಂಬಂಧಿಸಿದ ಚಟುವಟಿಕೆ ಸಹಿತ ವಿದ್ಯಾರ್ಥಿಗಳ ಜೀವನ ಶೈಲಿಯ ಬದಲಾವಣೆಯ ಶಿಕ್ಷಣ ನೀಡಲಿದ್ದೇವೆ ಎಂದರು.
ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಅಮೃತಕೃಷ್ಣ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.
ದ್ವಾರಕಾ ಕಾರ್ಪೋರೇಶನ್ ಪ್ರೈ.ಲಿ. ಇದರ ಕಾರ್ಪೋರೇಶನ್ ವಿಭಾಗದ ಮುಖ್ಯಸ್ಥ ದುರ್ಗಾ ಗಣೇಶ್ ಉಪಸ್ಥಿತರಿದ್ದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ನೇತೃತ್ವ ವಹಿಸಿಕೊಂಡ ದ್ವಾರಕಾ ಪ್ರತಿಷ್ಠಾನ | 75ರ ಸಂಭ್ರಮಕ್ಕೆ ವರ್ಷವಿಡೀ ಕಾರ್ಯಕ್ರಮ, ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮವೂ ಆರಂಭ
0
2,643
75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
Related Posts
ಮಹಿಳಾ ವೈದ್ಯೆಯ ಮೇಲೆ ಹಲ್ಲೆಗೆ ಯತ್ನ: ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
ಪುತ್ತೂರು: ಮಹಿಳಾ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಸೂಕ್ತ ಕ್ರಮ…
ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕ
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ…
ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!
ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಉದ್ಘಾಟಿಸಿದ ನಟ ರಮೇಶ್ ಅರವಿಂದ್
ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ…
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ‘ವರುಷದ ಹರುಷ’ ಶಾಪಿಂಗ್ ಹಬ್ಬ | ಗ್ರಾಹಕರಿಗೆ ಭರ್ಜರಿ ಕೊಡುಗೆಗಳು – ಸ್ಪೆಷಲ್ ಡಿಸ್ಕೌಂಟ್ಸ್!| ಜಿಲ್ಲೆಯಲ್ಲೇ ಅತ್ಯಧಿಕ, 25 ಸಾವಿರಕ್ಕೂ ಮಿಕ್ಕಿ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹ, ಅಭೂತಪೂರ್ವ ಸ್ಪಂದನೆ!!
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್, ತಮ್ಮ ವಾರ್ಷಿಕೋತ್ಸವದ ಸಂಭ್ರಮವನ್ನು 'ಜಿ.ಎಲ್.…
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ…
ಪುತ್ತೂರು ಜಾತ್ರೆ ಗದ್ದೆಯಲ್ಲಿ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು, ಪ್ರವೇಶ ದ್ವಾರ ಸಹಿತ ಹಲವೆಡೆ 44 ಸಿಸಿ ಕ್ಯಾಮರಾ
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ…
ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ…
ಏ.20ರಂದು ಉದ್ಘಾಟನೆಗೊಳ್ಳಲಿರುವ ದಕ್ಷಿಣ ಕನ್ನಡದ ಅತಿ ದೊಡ್ಡ ಶೋರೂಂನಲ್ಲಿದೆ ಹಲವು ಹೊಸತನ |ನಾಲ್ಕು ಅಂತಸ್ತಿನ ಬೃಹತ್ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್’ಗೆ ನಟ ರಮೇಶ್ ಅರವಿಂದ್ ಬ್ರಾಂಡ್ ಅಂಬಾಸಡರ್ |ಹತ್ತೂರಲ್ಲೂ ಹೆಸರು ಮಾಡಲಿದೆ ಪುತ್ತೂರ ಚಿನ್ನ
81 ವರ್ಷಕ್ಕೂ ಅಧಿಕ ಪರಂಪರೆ ಹೊಂದಿರುವ ಮುಳಿಯ ಚಿನ್ನದ ಮಳಿಗೆ ಇದೀಗ ಹೊಸ ಹೆಸರಿನೊಂದಿಗೆ, ಹಲವು…
ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ
ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ