Gl
ಸ್ಥಳೀಯ

ಎಸಿ ಕಚೇರಿಯಲ್ಲೇ ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಶಾಸಕರು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

core technologies

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119