ಸ್ಥಳೀಯ

ಕೊಳ್ತಿಗೆ, ಕೆಯ್ಯೂರು: ಆನೆ ಓಡಿಸಲು ಇಟಿಎಫ್ ತಂಡ ಆಗಮನ!

ಕಳೆದ ನಾಲ್ಕು ದಿನಗಳ ಹಿಂದೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅರ್ತಿಯಡ್ಕ ಎಂಬಲ್ಲಿ ಕಾಡಾನೆ ದಾಳಿ ನಡೆಸಿ ಮಹಿಳೆಯೋರ್ವರು ಮೃತಪಟ್ಟಿದ್ದು ಘಟನೆಯ ಬಳಿಕ ಜನ ಭಯಗೊಂಡಿದ್ದು , ಆನೆಯನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅರ್ತಿಯಡ್ಕ ಎಂಬಲ್ಲಿ ಕಾಡಾನೆ ದಾಳಿ ನಡೆಸಿ ಮಹಿಳೆಯೋರ್ವರು ಮೃತಪಟ್ಟಿದ್ದು ಘಟನೆಯ ಬಳಿಕ ಜನ ಭಯಗೊಂಡಿದ್ದು , ಆನೆಯನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

maithri

ಈ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದ ಶಾಸಕ ಅಶೋಕ್ ಕುಮಾರ್ ರೈ ಅವರು ಅರಣ್ಯ ಸಚಿವರಲ್ಲಿ ಮನವಿ ಮಾಡಿದ್ದು , ಸರಕಾರ ಮನವಿಗೆ ಸ್ಪಂದಿಸಿದ್ದು ಆನೆ ಓಡಿಸಲು ಇಟಿಎಫ್ ತಂಡವನ್ನು ಕಳುಹಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಶಾಸಕರು,  ಚಿಕ್ಕಮಗಳೂರಿನಿಂದ ಇಟಿಎಫ್ ತಂಡ ಆಗಮಿಸಿದ್ದು ಇವರು ಆನೆಯನ್ನು ಓಡಿಸುವ ಕೆಲಸವನ್ನು ಮಾಡಲಿದ್ದಾರೆ. ಈ ತಂಡದ ಬಳಿ ಆನೆ ಓಡಿಸಲು ಬೇಕಾದ ಮದ್ದು ಗುಂಡುಗಳು ಸೇರಿದಂತೆ ಇತರೆ ಪರಿಕರಗಳು ಇದೆ. ಮೇ 5ರಿಂದ ಇವರ ಕಾರ್ಯಾಚರಣೆ ಪ್ರಾರಂಭವಾಗಲಿದೆ. ಕೊಳ್ತಿಗೆ ಗ್ರಾಮದ ವಿವಿಧ ಕಡೆಗಳಲ್ಲಿ ಈ ತಂಡದ ಕಾರ್ಯಾಚರಣೆ ನಡೆಯಲಿದೆ. ದಟ್ಟ ಕಾಡುಗಳಿಂದ ಆಹಾರ ಹುಡುಕಿ ನಾಡಿಗೆ ಬಂದ ಆನೆಗಳನ್ನು ಮತ್ತೆ ಕಾಡಿಗೆ ಅಟ್ಟುವ ಕೆಲಸವನ್ನು ತಂಡ ಮಾಡಲಿದೆ ಎಂದು ಶಾಸಕರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124