tamanvi
ಧಾರ್ಮಿಕಸ್ಥಳೀಯ

ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನದ ಕೊರತೆ; ಸಂಸದ | ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಕಟೀಲ್, ಮಠಂದೂರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು.

ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇರುವಷ್ಟು ಕಾನೂನು ಬೇರೆಲ್ಲೂ ಇಲ್ಲ. ಹಾಗಾಗಿ ದೇವಸ್ಥಾನಗಳಿಗೆ ಬರುವ ಅನುದಾನವೂ ಕಡಿಮೆಯಾಗಿದೆ. ಆದ್ದರಿಂದ ಇಂದು ಗ್ರಾಮಸ್ಥರೇ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಶುಭಹಾರೈಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ ರೈ, ಬಾಲಕೃಷ್ಣ ಬೋರ್ಕೃರ್, ಸುಧಾಕರ್ ರಾವ್ ಆರ್ಯಾಪು, ಡಾ. ಸುರೇಶ್ ಪುತ್ತೂರಾಯ, ಸಂಜೀವ ಪೂಜಾರಿ ಕೂರೇಲು, ಮಹಾಬಲ ರೈ ವಳತ್ತಡ್ಕ, ಜಿ.ಕೆ. ಭಟ್, ಸೀತಾರಾಮ ರೈ, ಜಯಂತ ಶೆಟ್ಟಿ ಕಂಬಳತ್ತಡ್ಡ, ಗಿರೀಶ್ ಕಿನ್ನಿಮಜಲು, ಬಾಲಕೃಷ್ಣ ದೇವಸ್ಯ, ಡಾ. ಸತೀಶ್ ಎ.ಪಿ. ಮರಿಕೆ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 165