Gl
ಸ್ಥಳೀಯ

ಗಾನ ಕೋಗಿಲೆಯ ವಿರಹ ಗಾನ! ವಿಚ್ಛೇದನದ ಮೊರೆ ಹೋದ ಗಾಯಕಿ ಅಖಿಲಾ

ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Pashupathi

3 ವರ್ಷಗಳ ಹಿಂದೆ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು.

akshaya college

ಅಖಿಲಾ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಗಾಯಕಿಯಾಗಿ ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.

ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಪತಿ ಟಿ.ಆ‌ರ್ ಧನರಾಜ್ ಶರ್ಮಾ ಪರಸ್ಪರ ಒಪ್ಪಿ ಇದೇ ಜೂನ್ 12 ರಂದು ಪುತ್ತೂರು ಕೋರ್ಟ್‌ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ (ಜೂನ್ 18) ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನಲ್ಲಿ ದ.ಕ ಜಿಲ್ಲಾ ಸಹಕಾರಿ ಸಂಘಗಳ ಉಪ…