tamanvi
ಸ್ಥಳೀಯ

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

D_shiva_bhat
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು (ಜೂ 20): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ. ದಕ್ಷಿಣ ಕನ್ನಡ ಎಸ್ಪಿ ಅರುಣ್ (SP Arun) ಅವರಿಗೆ ಕರ್ನಾಟಕ ಹೈಕೋರ್ಟ್ (High Court) ನೋಟಿಸ್ ಜಾರಿ ಮಾಡಿದೆ. ಸೂಕ್ತ ದಾಖಲೆ (Document) ಸಲ್ಲಿಸುವಂತೆ ಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ
ಮಿಡ್ ನೈಟ್ ರೇಡ್ ಪ್ರಕರಣ ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿದ ದೂರ ಸಹ ನೀಡಿದ್ರು.
ಪೊಲೀಸರಿಗೆ ಹೈಕೋರ್ಟ್ ತಾಕೀತು
ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸಿ, ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125