tamanvi
ಕರಾವಳಿಸ್ಥಳೀಯ

ಪೊಲೀಸ್‌ ಜೀಪ್‌ಗೆ ಬೆಂಕಿ ಹಚ್ಚಲು ಮುಂದಾದ ಆಟೋ ಚಾಲಕ: ಕಾರಣವೇನು ಗೊತ್ತೇ?

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬ ಎಂಬಲ್ಲಿ ಸೋಮವಾರ( ಮಾ.11 ರಂದು)ಬೆಳಿಗ್ಗೆ ನಡೆದಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಚಾಲಕನನ್ನು ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು,ಸದ್ಯ ತಲೆಮರೆಸಿಕೊಂಡಿದ್ದಾನೆ.

ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ (ಡ್ರೆಸ್ ಕೋಡ್) ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿ, ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ರೂ. ದಂಡ ಹಾಕಿ ನೋಟೀಸ್ ನೀಡಿದರು.

ಇದೇ ಕಾರಣದಿಂದ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅನ್ಸಾರ್ ಬಳಿಕ ರಿಕ್ಷಾವನ್ನು ಪೊಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ. ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ನೀಡಲು ಮುಂದಾದ. ಎಸ್.ಐ. ಆತನ ಮೇಲೆ ದೂರು ನೀಡಿದ್ದಾರೆ. ಇದೀಗ ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174