ಸ್ಥಳೀಯ

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಮುಖಂಡರ  ಭೇಟಿ..!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ನಂತರ ಮದುವೆಗೆ ನಿರಾಕರಿಸಿದ ಪ್ರಕರಣದ ಸಂತ್ರಸ್ಥೆ ನಿವಾಸಕ್ಕೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು.

maithri

ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ ಕೃಷ್ಣ ರಾವ್‌ ನನ್ನು ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಮಹಿಳಾ ನಾಯಕರು ಈ ಸಂದರ್ಭ ಆಗ್ರಹಿಸಿದರು.

ನ್ಯಾಯ ಒದಗಿಸದಿದ್ದಲ್ಲಿ ಜಿಲ್ಲೆಯ ಜನಪರ ಮಹಿಳಾ ಸಂಘಟನೆಗಳನ್ನು ಜತೆ ಸೇರಿಸಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಿಯೋಗ ಎಚ್ಚರಿಸಿತು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ, ಮಾಜಿ ಕಾರ್ಪೊರೇಟ‌ರ್ ಜಯಂತಿ ಶೆಟ್ಟಿ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ದಲಿತ ಹಕ್ಕುಗಳ ಸಮಿತಿಯ ಈಶ್ವರಿ ಪದ್ಮುಂಜ, ನ್ಯಾಯವಾದಿ ಶೈಲಜಾ ಅಮರನಾಥ್‌, ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ ಕಾವೂರು, ಅಸುಂತಾ ಡಿ ಸೋಜಾ, ಪ್ರಮೀಳಾ ದೇವಾಡಿಗ, ಪ್ಲೇವಿ ಕ್ರಾಸ್ತಾ ನಿಯೋಗದಲ್ಲಿ ಇದ್ದರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124