tamanvi
ಕರಾವಳಿಸ್ಥಳೀಯ

ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ: ಇನ್ನಿಬ್ಬರು ವಶಕ್ಕೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

maithri

ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174