ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ ಪದಸ್ವೀಕಾರ ಸಮಾರಂಭ ಮಂಗಳವಾರ ಸುದಾನ ವಸತಿಯುತ ಶಾಲಾ ಆವರಣದಲ್ಲಿರುವ ಎಡ್ವರ್ಡ್ ಹಾಲಿನಲ್ಲಿ ನಡೆಯಿತು.
ಪದಪ್ರದಾನ ನೆರವೇರಿಸಿ ಮಾತನಾಡಿದ 3180 ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಡಾ. ಭಾಸ್ಕರ್ ಎಸ್., ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವುದೇ ರೋಟರಿ. ನಮಗೆ ಸಿಕ್ಕಿದ ಜವಾಬ್ದಾರಿಯನ್ನು ಉತ್ತಮ ಉದ್ದೇಶಕ್ಕಾಗಿ ನಿಭಾಯಿಸುವುದರಿಂದ, ರೋಟರಿಯ ಉದ್ದೇಶ ಈಡೇರುತ್ತದೆ ಎಂದರು.
ರೋಟರಿ ಎಂದರೆ ವೈವಿಧ್ಯ. ಎಲ್ಲಾ ವೃತ್ತಿಯವರು ಇಲ್ಲಿರುತ್ತಾರೆ. ಇಲ್ಲಿ ಭೇದ ಭಾವವೂ ಇಲ್ಲ. ಎಲ್ಲರೂ ಒಂದೇ. ರೋಟರಿಗೆ ಸೇರ್ಪಡೆಯಾದ ಬಳಿಕ ಪ್ರತಿಯೊಬ್ಬರೂ ಮೌಲ್ಯಯುತ ಸದಸ್ಯರೇ. ಹಣ ಕೊಟ್ಟವನಿಗೆ ಹೆಚ್ಚು ಬೆಲೆ ಎಂದೇನಿಲ್ಲ. ನಾವು ನೀಡುವ ಹಣ ವಿಶ್ವದ ಉತ್ತಮ ಕಾರ್ಯಕ್ಕೆ ವಿನಿಯೋಗ ಆಗುತ್ತದೆ ಎನ್ನುವುದನ್ನು ನಾವು ತಿಳಿದುಕೊಳ್ಳಬೇಕು. ಹಾಗೆಯೇ ಇದು ಸದಸ್ಯತ್ವಕ್ಕೆ ಮಾತ್ರವಲ್ಲ. ನಾಯಕತ್ವ ಗುಣ ಬೆಳೆಸಿಕೊಳ್ಳಲು ಬಳಸಿಕೊಳ್ಳಬೇಕು ಎಂದರು.
ಚಂದ್ರಹಾಸ ರೈ ಅವರು ಜೇಸಿಐ ತರಬೇತುದಾರರೂ ಹೌದು. ಆದ್ದರಿಂದ ಕ್ಲಬ್ಬನ್ನು ಉಳಿಸುವುದು, ಬೆಳೆಸುವುದು ಅವರಿಗೆ ಗೊತ್ತಿದೆ. ಇಂದಿನ ಕಾರ್ಯಕ್ರಮ ಇಡೀಯ ವರ್ಷದ ದಿಕ್ಸೂಚಿಯಾಗಿ ಮೂಡಿಬಂದಿದೆ ಎಂದ ಅವರು ರೋಟರಿ ತಂಡಕ್ಕೆ ಶುಭಹಾರೈಸಿದರು.
ಪದ ಸ್ವೀಕಾರ ಮಾಡಿ ಮಾತನಾಡಿದ ಚಂದ್ರಹಾಸ ರೈ, ರೋಟರಿ ವರ್ಷವನ್ನು ಆನಂದಿಸಬೇಕು ಎನ್ನುವ ಆಶಯ ನನ್ನದು. ಇದಕ್ಕೆ ಪೂರಕವಾಗಿದೆ ಇಂದಿನ ಪದಸ್ವೀಕಾರ ಸಮಾರಂಭ ಆಯೋಜನೆಗೊಂಡಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಂತೆಯೇ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಅವರಿಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಆದ್ದರಿಂದ ತಾನು ಯಾವುದೇ ವಿಷಯಕ್ಕೂ ತಲೆಕೆಡಿಸಿಕೊಳ್ಳುವ ಅನಿವಾರ್ಯತೆ ಬಂದಿಲ್ಲ. ಈ ಅಚ್ಚುಕಟ್ಟಿನ ಕಾರ್ಯಕ್ರಮಕ್ಕೆ ಕ್ಲಬ್ ಪದಾಧಿಕಾರಿ , ಸದಸ್ಯರೇ ಕಾರಣರು. ಇಡೀ ರೋಟರಿ ವರ್ಷವನ್ನು ಇದೇ ರೀತಿಯ ಒಗ್ಗಟ್ಟಿನಿಂದ ನಡೆಸಿಕೊಂಡು ಬರುತ್ತೇವೆ ಎಂದರು.
ಬುಲೆಟಿನ್ ಬಿಡುಗಡೆ ಮಾಡಿ ಮಾತನಾಡಿದ ಝೋನ್ 5ರ ಅಸಿಸ್ಟೆಂಟ್ ಗವರ್ನರ್ ಬಾಲಕೃಷ್ಣ ಪೈ ಪಿ. ರೋಟರಿಯ ಸೇವಾ ಭಾವನೆಯನ್ನು ಸದಸ್ಯರಿಗೆ ತಿಳಿಹೇಳಿ ಹೊಸಬರನ್ನು ಸೇರಿಸಿಕೊಳ್ಳಿ ಎಂದ ಅವರು, ಚಂದ್ರಹಾಸ ರೈ ಅವರು ಕಂಡ ಕನಸು ನನಸಾಗಲು ನನ್ನಿಂದಾದ ಸಹಕಾರ ನೀಡುತ್ತೇನೆ ಎಂದರು.
ಝೋನ್ 5ರ ಝೋನಲ್ ಲೆಫ್ಟಿನೆಂಟ್ ಉಮಾನಾಥ್ ಪಿ.ಬಿ., ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಅಧ್ಯಕ್ಷ ಸುಭಾಶ್ ರೈ ಬಿ. ಶುಭಹಾರೈಸಿದರು.
ಸನತ್ ರೈ, ದಿವಾಕರ್ ರೈ, ಡಾ. ರಾಜೇಶ್ ಬೆಜ್ಜಂಗಳ ಅವರು ಕ್ಲಬ್ ಸೇವಾ ಚಟುವಟಿಕೆಗಳನ್ನು ನಿರ್ವಹಿಸಿದರು. ನಿರ್ಗಮಿತ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಜಿ ಅವರನ್ನು ಸನ್ಮಾನಿಸಲಾಯಿತು.
ದೀಪಿಕಾ ವಸಂತ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಅಶ್ರಫ್ ಮುಕ್ವೆ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ವಸಂತ್ ಶಂಕರ್ ವರದಿ ವಾಚಿಸಿದರು. ಪದಪ್ರದಾನ ಅಧಿಕಾರಿಯವರ ಪರಿಚಯವನ್ನು ಡಾ. ರಾಜೇಶ್ ಬೆಜ್ಜಂಗಳ ಮುಖ್ಯ ಅತಿಥಿಗಳ ಪರಿಚಯವನ್ನು ಭಾರತಿ ಎಸ್. ಹಾಗೂ ಶಿವರಾಮ ಎಂ.ಎಸ್. ಸಭೆಯ ಮುಂದಿಟ್ಟರು. ಕ್ಲಬ್ ಗೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ಪದ್ಮನಾಭ ಶೆಟ್ಟಿ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜಯಪ್ರಕಾಶ್ ಎ.ಎಲ್. ವಂದಿಸಿದರು. ಡಾ. ರಾಮಚಂದ್ರ ಹಾಗೂ ಭಾರತಿ ಎಸ್. ರೈ ಕಾರ್ಯಕ್ರಮ ನಿರೂಪಿಸಿದರು.
ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾಗಿ ಪದಸ್ವೀಕಾರ ಮಾಡಿದ ಚಂದ್ರಹಾಸ ರೈ | ರೋಟರಿಯ ಉದ್ದೇಶ ಈಡೇರಲು ಕಾರ್ಯತತ್ಪರರಾಗಿ: ಡಾ. ಭಾಸ್ಕರ್ ಎಸ್.
What's your reaction?
- 694c
- 694cc
- 6ai technology
- 6alwas
- 6apology
- 6artificial intelegence
- 6avg
- 6bihar minister
- 5bjp
- 5bjp leader
- 5bjp national president
- 5bt ranjan
- 5co-operative
- 5coastal
- 5crime news
- 5darmasthala
- 5death news
- 4dust bin
- 4education
- 4gl
- 4gods own country
- 4google for education
- 4independence
- 4jewel
- 4jewellers
- 4jnana vikasa
- 3karnataka state
- 3kerala village
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 2nidana news
- 2nirvathu mukku
- 2nitin nabin
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 1revenue department
- 1revenue minister
- 1school
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಆರ್ಯಾಪು -ಕುರಿಯ ಗ್ರಾಮಸ್ಥರಿಗೆ ಅಶೋಕಜನಮನ ಉಡುಗೋರೆ ವಿತರಣೆ | ಶಕ್ತಿ ಇರುವ ತನಕ ಬಡವರ ಸೇವೆ ಮಾಡುವೆ; ಚುನಾವಣಾ ಸಮಯದಲ್ಲಿ ಆಶೀರ್ವಾದ ಮಾಡಿ: ಅಶೋಕ್ ರೈ
ಪುತ್ತೂರು: ನನ್ನಲ್ಲಿ ಶಕ್ತಿ ಇರುವ ತನಕ ನಾನು ಬಡವರ ಸೇವೆಯನ್ನು ಮಾಡುತ್ತಲೇ ಇರುವೆ, ನಾನು…
ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ
ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ…
ಕಲ್ಲರ್ಪೆ: ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ರಾಷ್ಟ್ರಪಕ್ಷಿ!!
ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.…
ಅಶೋಕ ಜನಮನದಲ್ಲಿ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…
ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…
ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!
ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ | ಹಠ, ಛಲದಿಂದ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
ವಿಟ್ಲ: ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ. ಹಾಗೆ…
ಪುತ್ತೂರು: ಕಂಬಳದ ಜೊತೆ ಕೆಸರುಗದ್ದೆ ಓಟದ ಸ್ಪರ್ಧೆ | ಮಾ. 1: ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಐತಿಹಾಸಿಕ ಕೋಟಿ – ಚೆನ್ನಯ ಕಂಬಳ
ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…




















