ಸ್ಥಳೀಯ

ಶಿವಧೂತೆ ಗುಳಿಗೆಯ ಭೀಮಾರಾವ್ ಖ್ಯಾತಿಯ ರಮೇಶ್ ಕಲ್ಲಡ್ಕ ನಿಧನ!!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು.

akshaya college

ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ ಕಳೆದ 20 ವರ್ಷಗಳಿಂದ ಹತ್ತಾರು ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.

ತುಳು ರಂಗಭೂಮಿಯಲ್ಲಿ ಹೊಸ ಇತಿಹಾಸ ಬರೆದ ಶಿವಧೂತೆ ಗುಳಿಗೆ ನಾಟಕದಲ್ಲಿ ಭೀಮಾರಾವ್‌ ಪಾತ್ರದಲ್ಲಿ ಮಿಂಚುತ್ತಿದ್ದರು. ಉಳಿದಂತೆ ಒರಿಯರ್ದೊರಿ ಅಸಲ್‌, ಮದಿಮೆ, ಕುಟುಂಬ, ಶಿವಾಜಿ ಮೊದಲಾದ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ. ಕಲ್ಲಡ್ಕ ಶಾರದೋತ್ಸವ, ಸರಕಾರಿ ಶಾಲೆಯ ಅಭಿವೃದ್ಧಿಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115