ಸ್ಥಳೀಯ

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ


ಪುತ್ತೂರು: ಪ್ರಯಾಣಿಕರ ಬಹುಕಾಲದ ಬೇಡಿಕೆಯೊಂದು ಈ ಬಾರಿ ಈಡೇರಿದೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಸಾರಿಗೆ ಇಲಾಖೆಯ ವತಿಯಿಂದ ಅಂಬಾರಿ ಉತ್ಸವ್ ಬಸ್ ಜು.27 ರಿಂದ ಸಂಚಾರ ಆರಂಭ ಮಾಡಿದೆ.
ಮಂಗಳೂರಿನಿಂದ ಹೊರಡುವ ಬಸ್ಸು ಪುತ್ತೂರಿಗೆ ಪ್ರತೀ ದಿನ ರಾತ್ರಿ 10.30 ಕ್ಕೆ ತಲುಪುತ್ತದೆ. ಪುತ್ತೂರು ,ಸುಳ್ಯ,ಮಡಿಕೇರಿ,ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತದೆ. ಪೂರ್ತಿ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ಈ ಸೌಲಭ್ಯಧಿಂದ ಪುತ್ತೂರು‌ಭಾಗದ ಪ್ರಯಾಣಿಕರು ವಂಚಿತರಾಗಿದ್ದರು. ಅಂಬಾರಿ ಉತ್ಸವ್ ಬಸ್ ಆರಂಭ ಮಾಡುವಂತೆ ಶಾಸಕ ಅಶೋಕ್ ರೈ ಅವರಿಗೆ ಸಾರ್ವಜನಿಕರು ಮನವಿ ಮಾಡಿದ್ದರು.

akshaya college

ಅಂಬಾರಿ ಉತ್ಸವ್ ಬಸ್ ಸೌಲಭ್ಯಕ್ಕಾಗಿ ಸಾರ್ವಜನಿಕರಿಂದ‌ ಮನವಿ ಬಂದಿತ್ತು. ಈ ವಿಚಾರದ ಬಗ್ಗೆ ಕೆಎಸ್ಆರ್ಟಿಸಿ ಅಧಿಕಾರಿಗಳ ಜೊತೆ ಚರ್ಚಿಸಿ ಪುತ್ತೂರು ಸುಳ್ಯ ಮಾರ್ಗವಾಗಿ ಬೆಂಗಳೂರಿಗೆ ಈ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.ಪ್ರಯಾಣಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ವಿನಂತಿ‌ಮಾಡುತ್ತಿದ್ದೇನೆ

ಅಶೋಕ್ ರೈ ಶಾಸಕರು,ಪುತ್ತೂರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115