tamanvi
ಸ್ಥಳೀಯ

ಜಿ.ಎಲ್. ಆಚಾರ್ಯ ಶತಮಾನೋತ್ಸವ – ಆಚಾರ್ಯ ಕವಿಗೋಷ್ಠಿ | ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥ ಮಾಡಿಕೊಳ್ಳಬೇಕು: ಪ್ರೊ. ವಿ.ಬಿ. ಅರ್ತಿಕಜೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಧ್ಯಾಪಕ ಪ್ರೋ. ವಿ.ಬಿ. ಅರ್ತಿಕಜೆ ಹೇಳಿದರು.

maithri

ಅವರು ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲೆ, ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವಿವಿಧ ಬಗೆಯ ಸಾಹಿತ್ಯ ಓದು ಕಡಿಮೆಯಾಗುತ್ತಿದೆ. ಶಿಕ್ಷಕರು ಸಾಹಿತ್ಯದ ಬಗೆಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕನ್ನಡ ಭಾಷೆಯ ಸೌಂದರ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಶಿಕ್ಷಕ ಸಾಹಿತಿಗಳಿಗೆ ಕಿವಿಮಾತು ಹೇಳಿದರು.

ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಸ್’ನ ಮಾಲಕ ಜಿ.ಎಲ್. ಬಲರಾಮ ಆಚಾರ್ಯ ಅವರು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗೀತಾಚಾರ್ಯ ಶ್ರೀಕೃಷ್ಣ ಜಗದ್ಗುರು. ಶಿಕ್ಷಕರೆಲ್ಲಾ ಆಚಾರ್ಯರು. ಅವರ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಗೌರವವಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಭಾಗವಹಿಸಿದ ಕವಿಗಳಿಗೆ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಜಯಾನಂದ ಪೆರಾಜೆ ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಕವನ ಸಂಕಲನ ಗೀತಾಫಲ ಕೃತಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಬಿಡುಗಡೆಗೊಳಿಸಿ ಪುಸ್ತಕದ ಹೂರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತಿಗಳು ತಮ್ಮ ಕೃತಿಗಳಿಂದ ಗುರುತಿಸಲ್ಪಡಬೇಕೇ ಹೊರತು ಹೆಸರಿನಂದಲ್ಲ ಎಂದು ಅಭಿಪ್ರಾಯ ಪಟ್ಟರು.

ಮುಖ್ಯ ಅತಿಥಿಯಾಗಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಡಾ. ಶಾಂತಾ ಪುತ್ತೂರು ಅವರು ವಿ.ಬಿ. ಅರ್ತಿಕಜೆಯವರಿಗೆ ರಕ್ಷಾಬಂಧನ ಮಾಡಿದರು.

ಕವಿಗಳಾದ ಗುಣಾಜೆ ರಾಮಚಂದ್ರ ಭಟ್, ಡಾ. ಸುರೇಶ ನೆಗಳಗುಳಿ, ಹಾ.ಮ. ಸತೀಶ ಬೆಂಗಳೂರು, ವಿಜಯ ಕುಮಾರ ಹೆಬ್ಬಾರಬೈಲು ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಣ ಸೌರಭ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಕಥಾಬಿಂದು ಪ್ರಕಾಶನ ಮಂಗಳೂರಿನ ಕಾದಂಬರಿಕಾರ ಪಿ.ವಿ. ಪ್ರದೀಪ್ ಕುಮಾರ್ ಶುಭಾಸಂಶನೆ ಮಾಡಿ, ವಂದಿಸಿದರು. ದೇವಕಿ ಜಯಾನಂದ ಉಪ್ಪಿನಂಗಡಿ ಕಾರ್ಯಕ್ರಮ ನಿರೂಪಿಸಿದರು.

ಡಾ. ವಾಣಿಶ್ರೀ ಕಾಸರಗೋಡು ತಂಡದಿಂದ ಸಾಹಿತ್ಯ ಗಾನ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126