ಪುತ್ತೂರು : ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ಶಿಂಟೂರು ಸ್ಮೃತಿ-2025 ಕಾರ್ಯಕ್ರಮ ಅ.14ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಕರ್ನಲ್ ರಾಜೇಶ್ ಹೊಳ್ಳ ಎಂ.ಎಸ್ ಅವರಿಗೆಶೀಂಟೂರು ಸನ್ಮಾನ’ ಪ್ರದಾನ ಮಾಡಲಾಗುವುದು ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರಿ ರತ್ನ' ಸವಣೂರು ಕೆ.ಸೀತಾರಾಮ ರೈ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 14ನೇ ವರ್ಷದ ಸ್ಥಾಪಕರ ದಿನಾಚರಣೆಶೀಂಟೂರು ಸ್ಮೃತಿ’ ಕಾರ್ಯಕ್ರಮವನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎ.ಆರ್ ಉದ್ಘಾಟಿಸಲಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾದ ವಕೀಲ ಅಶ್ವಿನ್ ಎಲ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಇತ್ತೀಚೆಗೆ ನಿವೃತ್ತಿಗೊಂಡಿರುವ ಬಂಟ್ವಾಳದ ಕರ್ನಲ್ ರಾಜೇಶ್ ಹೊಳ್ಳ ಎಸ್.ಎಂ ಅವರಿಗೆ ಶೀಂಟೂರು ಸನ್ಮಾನ ಪ್ರದಾನ ಮಾಡಲಾಗುವುದು. ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಸನ್ಮಾನ ಕಾರ್ಯ ನಡೆಸಲಿದ್ದಾರೆ. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮೆನೇಜರ್ ಸೂಂತೋಡು ಹೂವಯ್ಯ ಸುಳ್ಯ ಶೀಂಟೂರು ಸಂಸ್ಮರಣಾ ಉಪನ್ಯಾಸ ನೀಡಲಿದ್ದಾರೆ. ಸವಣೂರು ಎಸ್.ಎನ್.ಆರ್.ರೂರಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿ ಎನ್.ಸುಂದರ ರೈ ನಡುಮನೆ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
10 ವಿದ್ಯಾರ್ಥಿಗಳಿಗೆ ಶೀಂಟೂರು ಶಿಷ್ಯವೇತನ ವಿತರಣೆ:
ಪ್ರತೀ ವರ್ಷ ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಯ ೧೦ ಮಂದಿ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ತಲಾ ರೂ.೫ ಸಾವಿರದಂತೆ ಶಿಷ್ಯವೇತನ ನೀಡಲಾಗುತ್ತಿದೆ. ಈ ವರ್ಷ ಧನ್ಯಶ್ರೀ ಬಿ.ಡಿ(ತೃತೀಯ ಬಿಕಾಂ), ದೀಕ್ಷಿತ್ ಜಿ(ತೃತೀಯ ಬಿಎ), ಪವನ್ ಹೆಚ್.ಎಸ್(ತೃತೀಯ ಬಿಸಿಎ), ಶ್ರೀರಕ್ಷ ಪಿ(ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗ), ಪ್ರತೀಕ್ಷ ಪಿ(ವಾಣಿಜ್ಯ ವಿಭಾಗ), ಶಝಾ ಫಾತಿಮ(10ನೇ ತರಗತಿ), ಎನ್.ಆರ್.ಇಫಾ(೮ನೇ ತರಗತಿ), ವಂದನ್ ರೈ ಸಿ(೭ನೇ ತರಗತಿ), ದಿವಿತ್(೫ನೇ ತರಗತಿ) ಮತ್ತು ಯುಕೆಜಿಯ ಅಝ ಫಾತಿಮ ಅವರಿಗೆ ಶೀಂಟೂರು ಶಿಷ್ಯವೇತನ ನೀಡಿ ಪುರಸ್ಕರಿಸಲಾಗುವುದು ಎಂದು ಮಾಹಿತಿ ನೀಡಿದರು. .
ಸುದ್ಧಿಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾದ ವಕೀಲ ಅಶ್ವಿನ್ ಎಲ್ ಶೆಟ್ಟಿ, ಸವಣೂರು ಎಸ್.ಎನ್.ಆರ್.ರೂರಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ಎನ್.ಸುಂದರ ರೈ ನಡುಮನೆ, ರಶ್ಮಿ ಅಶ್ವಿನ್ ಶೆಟ್ಟಿ ಸವಣೂರು, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ ಉಪಸ್ಥಿತರಿದ್ದರು.
ಅ. 14: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ’ | ನಿವೃತ್ತ ಸೈನಿಕ ಕರ್ನಲ್ ರಾಜೇಶ್ ಹೊಳ್ಳ ಎಂ.ಎಸ್ ಅವರಿಗೆಶೀಂಟೂರು ಸನ್ಮಾನ’ ಪ್ರದಾನ
What's your reaction?
- 394c
- 394cc
- 3ai technology
- 3ajjavara
- 2alwas
- 2apology
- 2artificial intelegence
- 2avg
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2crime
- 2crime news
- 2cyclothon
- 2darmasthala
- 2death news
- 2dust bin
- 2education
- 2fraud
- 2gl
- 2gods own country
- 2gold
- 2google for education
- 2independence
- 2jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!
ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…
ರೋಹಿಣಿ ನೆಹರುನಗರ ಅವರಿಗೆ ಶಿವಶರಣೆ ಗಂಗಾಬಿಕೆ ಪುರಸ್ಕಾರ
ಪುತ್ತೂರು: ಎಂ.ಪಿ. ರೋಹಿಣಿ ರಾಘವ ಆಚಾರ್ಯ ಅವರಿಗೆ ಬೆಂಗಳೂರಿನಲ್ಲಿ ಶಿವ ಶರಣೆ ಗಂಗಾಬಿಕೆ…
ಪುತ್ತೂರು: ನಾಳೆ ಇಲ್ಲೆಲ್ಲಾ ಇರಲ್ಲ ಕರೆಂಟ್!!
ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಫೆ. 26ರಂದು ಪುತ್ತೂರಿನ ಹಲವು ಕಡೆ ವಿದ್ಯುತ್…
ಡಾ. ಯದುರಾಜ್, ಡಾ. ಜೈನಾಬ ಸುನು ಆಲಿ, ಡಾ. ಅಜಯ್ ಅವರಿಗೆ ಸನ್ಮಾನ | ವಿಶೇಷ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರಿಂದ ಗೌರವ
ಪುತ್ತೂರು ಹಾಗೂ ಕಡಬ ತಾಲೂಕು ವಿಕಲ ಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ…
ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು: ಶಾಸಕರ ಸೇಡಿನ ರಾಜಕಾರಣ-ಮಠಂದೂರು
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಿರುವ ಕ್ರಮ…























