ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು.
ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಜೀವನವನ್ನು ತ್ಯಾಗ, ಬಲಿದಾನ ಮಾಡಿದ ಭಗತ್ ಸಿಂಗ್, ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಹಿಂಸಾ ತತ್ವದಲ್ಲಿ ಅನೇಕ ಚಳುವಳಿಗಳ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಚುಕ್ಕಾಣಿ ಹಿಡಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸ್ವತಂತ್ರ ಭಾರತದ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಮೊದಲಾದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ನಿಸ್ವಾರ್ಥ ಸೇವೆ, ಅವರ ದೇಶ ಪ್ರೇಮ ನಮಗೆಲ್ಲರಿಗೂ ಆದರ್ಶ. ನನ್ನ ದೇಶ ನನ್ನ ಹೆಮ್ಮೆ ಎಂಬ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತಿಯಿಂದ, ನಮ್ಮ ರಾಷ್ಟ್ರಕ್ಕೆ ಸುರಕ್ಷತೆ ನೀಡುವ ನಮ್ಮ ಯೋಧರನ್ನು, ದೇಶಕ್ಕೆ ಅನ್ನ ನೀಡುವ ನಮ್ಮ ರೈತರನ್ನು ನಾವು ಸದಾ ಗೌರವಿಸಬೇಕು ಎಂದರು.
ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆ, ಭ್ರಷ್ಟಾಚಾರ, ಕೋಮು ಗಲಭೆಗಳು ಸಮಾಜದ ಶಾಂತಿಯುತ ಬದುಕಿಗೆ ಮಾರಕವಾಗಿದೆ . ಈ ನಿಟ್ಟಿನಲ್ಲಿ ಯುವ ಸಮೂಹ ಜಾಗೃತರಾಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಜಗತ್ತಿನ ಎಲ್ಲಾ ರಾಷ್ಟ್ರಗಳ ವಿಶ್ವಾಸವನ್ನು ಗಳಿಸುತ್ತಾ ಜಗತ್ತಿನ ಅತ್ಯಂತ ಶ್ರೇಷ್ಠ ನಾಯಕ ಎಂಬುವುದು ನಮ್ಮೆಲ್ಲರ ಹೆಗ್ಗಳಿಕೆ. ‘ಆಪರೇಷನ್ ಸಿಂಧೂರ್’ ನಲ್ಲಿ ಭಾರತದ ಮಿಲಿಟರಿ ಶಕ್ತಿ, ನಮ್ಮ ಯೋಧರ ತಾಕತ್ತು , ಭಾರತದ ಸಾಮರ್ಥ್ಯ ಜಗತ್ತಿಗೆ ಅರಿವಾಗಿದೆ. ನಾವೆಲ್ಲರೂ ಪಣ ತೊಟ್ಟು ದುಡಿಯ ಬೇಕಾಗಿದೆ ಎಂದು ಕರೆ ನೀಡಿದರು.
ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ನಮ್ಮ ಯೋಧರ ತಮ್ಮ ಜೀವವನ್ನು ಪಣಕ್ಕಿಟ್ಟು ನಮಗೆ ಸುರಕ್ಷತೆ ನೀಡುತ್ತಿರುವಾಗ ,ದೇಶದ ಒಳಗೆ ಭಯೋತ್ಪಾದನೆ ಮತ್ತು ಸಾಮಾಜಿಕ ಅಶಾಂತಿಯ ಸೃಷ್ಟಿಸುವುದು ವಿಪರ್ಯಾಸ. ಈ ಹಿನ್ನೆಲೆಯಲ್ಲಿ ಯುವ ಸಮೂಹ ಎಚ್ಚೆತ್ತು ದೇಶ ರಕ್ಷಣೆ ಮತ್ತು ಭಾರತದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ನಾವು ನಮ್ಮ ಕರ್ತವ್ಯವನ್ನು ಯಥಾವತ್ತಾಗಿ ಮಾಡಿದರೆ ; ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಹಿರಿಯರನ್ನು ಗೌರವಿಸಿ , ಅವರ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ , ಉತ್ತಮ ಕಲಿಕೆ ಮತ್ತು ಸುಸಂಸ್ಕೃತ ಜೀವನ ನಡೆಸಿದರೆ ನಮ್ಮ ಜೀವನ ಸಾರ್ಥಕ ಎಂದು ತಿಳಿಸಿದರು.
ಪ್ರಾಂಶುಪಾಲ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಉಪಸ್ಥಿತರಿದ್ದರು.
ಫ್ಯಾಷನ್ ಡಿಸೈನ್ ವಿಭಾಗದ ವಿದ್ಯಾರ್ಥಿನಿಯರಾದ ಪ್ರಕೃತಿ, ರಮ್ಯಾ, ಮೋಕ್ಷ ರಾಷ್ಟ್ರಗೀತೆ ಮತ್ತು ಧ್ವಜ ಗೀತೆ ಹಾಡಿದರು. ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ನಾಯಕ ರಾಕೇಶ್ ಸ್ವಾಗತಿಸಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ವರ್ಷಿಣಿ ವಂದಿಸಿದರು. ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ
What's your reaction?
- 3294c
- 3294cc
- 31ai technology
- 31ajjavara
- 30alwas
- 30apology
- 29artificial intelegence
- 29avg
- 28bihar minister
- 28bjp
- 27bjp leader
- 27bjp national president
- 26bt ranjan
- 26co-operative
- 25coastal
- 25crime
- 25crime news
- 24cyclothon
- 24darmasthala
- 23death news
- 23dust bin
- 22education
- 22fraud
- 21gl
- 21gods own country
- 20gold
- 20google for education
- 19independence
- 19jewel
- 18jewellers
- 18jnana vikasa
- 17karnataka state
- 17kerala village
- 16kukke - kollur temple
- 16lokayuktha
- 15lokayuktha raid
- 15manipal
- 14minister krishna bairegowda
- 14mla ashok rai
- 13mohan alwa
- 13mudubidre
- 12nidana news
- 12nirvathu mukku
- 11nitin nabin
- 11police
- 10ptr tahasildar
- 10puttur
- 9puttur news
- 9puttur tahasildar
- 8republic
- 8revenue
- 7revenue department
- 7revenue minister
- 6school
- 6senior citizen
- 5silver
- 5society
- 4sowmya
- 4students
- 3tahasildar
- 3tahasildar absconded
- 2teachers
- 2tour
- 1trending
- 1udupi
- 0wastage
Related Posts
ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೋಟೀಶ್ವರ್ ಸಿಂಗ್
ಪುತ್ತೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೋಟೀಶ್ವರ್ ಸಿಂಗ್ ಅವರು ಶನಿವಾರ ಪುತ್ತೂರಿಗೆ…
ಮಹಾವೀರ ಆಸ್ಪತ್ರೆಯಲ್ಲಿ ಕೆ.ಎಂ.ಸಿ. ಲ್ಯಾಬ್, ಡಾ. ಆಶಾ ಪುತ್ತೂರಾಯರಿಂದ ನೇತ್ರ ವಿಭಾಗ ಆರಂಭ
ಪುತ್ತೂರು: ಮಹಾವೀರ ಆಸ್ಪತ್ರೆ ಎಂದೇ ಜನರಿಂದ ಕರೆಸಿಕೊಳ್ಳುವ ಬೊಳುವಾರು ಮಹಾವೀರ ಮೆಡಿಕಲ್…
ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ
ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…
ವೀರಪ್ಪ ಮೊಯ್ಲಿ (veerappa moily) ಅವರ ಪುತ್ರಿ ಹಂಸ ಮೊಯ್ಲಿ ನಿಧನ!
ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…
ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026 ಆಯ್ಕೆ
ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಮುಚ್ಚಲು ಗಡು: ಕಮಿಷನರ್ ಗೆ ಶಾಸಕರಿಂದ ತರಾಟೆ
ಪುತ್ತೂರು: ಪುತ್ತೂರುನಗರಸಭಾ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಹೊಂಡಗಳ…






















