ಸ್ಥಳೀಯ

ಇನ್ನು ಮುಂದೆ ಒಂದೇ ಪರಿವಾರ | ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯರ ಮಾತು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Shani-pooja

ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಕೂಡ ಸಾಕಷ್ಟು ಕೆಲಸ ಮಾಡಿದ್ದರು. ಇದೀಗ ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವ ಹಿನ್ನೆಲೆಯಲ್ಲಿ ಡಾ. ಪುತ್ತೂರಾಯ ಅವರು ಮನದುಂಬಿ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಅರುಣ್‌ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರ್ಪಡೆಗೊಂಡಿರುವುದು ಸಂತೋಷವಾಗಿದೆ. ಇದಕ್ಕೆ ಮೊದಲೇ ಈ ಕೆಲಸ ಆಗಬೇಕಿತ್ತು. ತಡವಾಗಿಯಾದರೂ ಬಿಜೆಪಿ ಸೇರ್ಪಡೆ ಉತ್ತಮ ಬೆಳವಣಿಗೆ ಎಂದಿದ್ದಾರೆ.

ಮುಂದೆ ನಾಯಕರು, ಕಾರ್ಯಕರ್ತರು ಒಂದೇ ಮನಸ್ಸಿನಿಂದ ಕೆಲಸ ಮಾಡಿ, ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಹಿಂದಿನ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೇ, ಒಂದೇ ಮನಸ್ಸಿನಿಂದ ಕಾರ್ಯತತ್ಪರರಾಗಬೇಕು. ಇನ್ನು ಮುಂದೆ ಒಂದೇ ಪರಿವಾರ. ಅದು ಮೋದಿ ಪರಿವಾರ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 122