ಸ್ಥಳೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗರಿಂದಲೇ ಬಿಜೆಪಿ ಮುಕ್ತ | ಪತ್ರಿಕಾಗೋಷ್ಠಿಯಲ್ಲಿ ನೂರುದ್ದೀನ್ ಸಾಲ್ಮರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹೊಸದಾಗಿ ಮೇಲ್ದರ್ಜೆಗೇರಿದ ಕಡಬ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನಿಂದ ಆ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಕಡಬ ಪಟ್ಟಣ ಪಂಚಾಯತ್ ಚುನಾವಣಾ ಕಾಂಗ್ರೆಸ್ ಉಸ್ತುವಾರಿ ನೂರುದ್ದೀನ್ ಸಾಲ್ಮರ ಹೇಳಿದರು.

maithri

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ನಾಯಕರು, ಕಾರ್ಯಕರ್ತರ ಸಹಕಾರದಿಂದ ಚುನಾವಣೆಯನ್ನು ಗೆದ್ದಿದ್ದೇವೆ. ಇದಕ್ಕೆ ಪೂರಕವಾಗಿ ಪಂಚ ಗ್ಯಾರೆಂಟಿಗಳು, ಕಾಂಗ್ರೆಸಿನ ಆಡಳಿತವೂ ಕೆಲಸ ಮಾಡಿದೆ. ಬಿಜೆಪಿಗರ ಕೋಮುವಾದ ಇಲ್ಲಿ ಗೆದ್ದಿಲ್ಲ ಎನ್ನುವುದಕ್ಕೆ ನಿದರ್ಶನ ಇದೆ. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಬಿಜೆಪಿಗರೆ ಬಿಜೆಪಿ ಮುಕ್ತ ಮಾಡಿದ್ದಾರೆ ಎಂದರು.

ಕಳಾರ ವಾರ್ಡ್ ನಂಬರ್ 1ರಲ್ಲಿ ಬಿಜೆಪಿ ಶೂನ್ಯ ಮತ ಪಡೆದು, ರಾಷ್ಟ್ರ ಮಟ್ಟದಲ್ಲಿ ಮುಜುಗರಕ್ಕೆ ಒಳಪಟ್ಟಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಬಿಜೆಪಿಯ ವಾರ್ಡ್ ಅಧ್ಯಕ್ಷರು, ಅಭ್ಯರ್ಥಿ ಸೂಚಕರೇ ಅಭ್ಯರ್ಥಿ ಪರವಾಗಿ ಮತ ಹಾಕಿಲ್ಲ ಎನ್ನುವುದು ಉಲ್ಲೇಖನೀಯ ಅಂಶ. ಬಿಜೆಪಿಯ ಕೋಮುವಾದ, ಅಪಪ್ರಚಾರ ಇಲ್ಲಿ ನಡೆಯಲಿಲ್ಲ ಎಂದರು.

ಕೆಪಿಸಿಸಿ ಮಾಜಿ ಸದಸ್ಯ ನಿರ್ಮಲ್ ಕುಮಾರ್ ಜೈನ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಉಷಾ ಅಂಚನ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ನಜೀರ್ ಮಠ, ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಉಲ್ಲಾಸ್ ಸಾಲ್ಯಾನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124