tamanvi
ಸ್ಥಳೀಯ

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ; ಜಾಮೀನು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ನೀಡಿದೆ.

maithri

ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ ವಿಜೇತ್‌ ಪುರಸ್ಕರಿಸಿ ಜಾಮೀನು ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯ ಗಳಿಸಿದ ಬಳಿಕ ವಿಜಯೋತ್ಸವ ಆಚರಿಸುತ್ತಿದ್ದ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಕಾಂಗ್ರೆಸ್‌ ನಾಯಕರು ಆರಂಭದಲ್ಲಿ ಇದನ್ನು ನಿರಾಕರಿಸಿದ್ದರೂ ಎಫ್‌ಎಸ್‌ಎಲ್‌ ವರದಿ ಬಂದ ಬಳಿಕ ಮೂವರನ್ನು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀನು ದೊರಕಿದೆ.

ವಿಧಾನ ಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಕೂಗಿದ ಪ್ರಕರಣ ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಂಡಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125