Gl
ಸ್ಥಳೀಯ

ಅಡಕೆ ಕಲಬೆರಕೆ ಕಾನೂನಿನಡಿ ಕೇಸು ದಾಖಲಿಸಲು ಸಹಾಯಕ ಆಯುಕ್ತರೊಂದಿಗೆ ಚರ್ಚೆ |ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಒಕ್ಕೂಟ ಹೇಳಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹೊರದೇಶಗಳಿಂದ ಆಮದಾಗುವ ಟನ್ ಗಟ್ಟಲೆ ಅಡಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅದರಲ್ಲೂ ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯಗಳಿಂದ ಬರುವ ಅಡಕೆಯನ್ನು ಇಲ್ಲಿಯ ಅಡಕೆಯೊಂದಿಗೆ ಬೆರಕೆ ಮಾಡುವುದರ ವಿರುದ್ಧ ಕಲಬೆರಕೆ ಕಾನೂನಿನಡಿ ಪ್ರಕರಣ ದಾಖಲಿಸಲು ಈಗಾಗಲೇ ಪುತ್ತೂರು ಸಹಾಯಕ ಆಯುಕ್ತರೊಂದಿಗೆ ಚರ್ಚೆ ನಡೆಸಲಿದ್ದೇವೆ ಎಂದು ರಾಜ್ಯ ರೈತ ಸಂಘ ಒಕ್ಕೂಟದ ಮುಖ್ಯಸ್ಥ ಸನ್ನಿ ಡಿಸೋಜಾ ತಿಳಿಸಿದ್ದಾರೆ.

rachana_rai
Pashupathi
akshaya college
Balakrishna-gowda

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ನಿನ್ನೆ ಕಿದುವಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಹೊರ ದೇಶಗಳಿಂದ ಅಡಕೆ ಆಮದು ಆಗುತ್ತಿಲ್ಲ. ಆದರೆ ಬರ್ಮಾ, ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಐದು ದೇಶಗಳಿಂದ ಕಳಪೆ ಗುಣಮಟ್ಟ ಅಡಕೆ ಆಮದಾಗುತ್ತಿರುವ ಕುರಿತು ಮಾಹಿತಿಗಳು ತಿಳಿದು ಬಂದಿದೆ. ನಯಾ ಪೈಸೆ ಟ್ಯಾಕ್ಸ್ ಇಲ್ಲದೆ ಅಡಕೆ ಆಮದಾಗುತ್ತಿದ್ದು, ಇದು ಸುಳ್ಳು ಎಂದು ಸರಕಾರ ಜನರನ್ನು ದಾರಿತಪ್ಪಿಸಲು ಹೊರಟಿದೆ. ಈ ಕುರಿತು ನೈತಿಕ ಹೊಣೆಹೊತ್ತ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

pashupathi

ಒಕ್ಕೂಟದ ಇನ್ನೋರ್ವ ಮುಖ್ಯಸ್ಥ ರೂಪೇಶ್ ರೈ ಅಲಿಮಾರ್ ಮಾತನಾಡಿ, ಕೃಷಿಕರ ಜೀವನಾಡಿಯಾದ ದಕ್ಷಿಣ ಕನ್ನಡ ಜಿಲ್ಲೆಗೆ ಹೊರ ರಾಜ್ಯಗಳಿಂದ ಅಡಕೆ ಬಾರದಂತೆ ಆಡಳಿತ ವ್ಯವಸ್ಥೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಹೊರರಾಜ್ಯಗಳಿಂದ ಅಡಕೆ ಬಂದದ್ದು ಗೊತ್ತಾದಲ್ಲಿ ನಾವೇ ಅಡಕೆ ಲಾರಿಗಳಿಗೆ ಬೆಂಕಿ ಹಾಕುವ ಕೆಲಸ ಮಾಡುತ್ತೇವೆ. ಇಲ್ಲವೇ ಯಾವ ಗೋಡೌನ್ಗೆ ಅಡಕೆ ಬರುತ್ತದೆಯೋ ಅದಕ್ಕೆ ಬೀಗ ಜಡಿಯುವ ಕೆಲಸ ಮಾಡುತ್ತೇವೆ. ಈ ಕುರಿತು ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್ ಈ ಕುರಿತು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಖಲೀಲ್, ಸುರೇಶ್ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101