ಪುತ್ತೂರು: ಶತಮಾನ ಕಂಡಿರುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನ ಆಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಇದರ ಪ್ರಮುಖ ಯೋಜನೆಗಳಿಗೆ ಸೆ. 14ರಂದು ನಡೆಯುವ 116ನೇ ವರ್ಷದ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪುತ್ತೂರು ಕೋಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷಕಿಶೋರ್ ಕೊಳತ್ತಾಯ ಎನ್ ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 2024-25ನೇ ಸಾಲಿನಲ್ಲಿ ನಮ್ಮ ಬ್ಯಾಂಕ್ ಇತಿಹಾಸದಲ್ಲಿ ಒಂದು ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು ಠೇವಣಿ ರೂ.74.87 ಕೋಟಿ, ಒಟ್ಟು ಸಾಲ ರೂ.51.39 ಕೋಟಿಗಳಾಗಿದು ,ಒಟ್ಟು ವ್ಯವಹಾರ ರೂ. 126.26 ಕೋಟಿ ದಾಟಿದೆ.ಈ ವರ್ಷದ ನಿವ್ವಳ ಲಾಭ ರೂ.1.04 ಕೋಟಿ ಆಗಿದೆ.ಹಲವು ಯೋಜನೆಗಳನ್ನು ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು.ಆಬಳಿಕ ಈ ಆರ್ಥಿಕ ವರ್ಷಾಂತ್ಯದೊಳಗೆ ಬ್ಯಾಂಕನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ನಮ್ಮ ಪ್ರಯತ್ನ ಸಾಗಲಿದೆ ಎಂದವರು ಹೇಳಿದರು.
ಹಲವು ಸಾಧನೆಗಳು:
ಆರ್ಬಿಐ ನಿಯಮಾನುಸಾರ ಬಲಿಷ್ಠ ಕೋ ಓಪರೇಟಿವ್ ಬ್ಯಾಂಕ್ ಎನಿಸಿಕೊಳ್ಳಲು ಬ್ಯಾಂಕಿನ ನಿವ್ವಳ ಅನುತ್ಪಾದಿತ ಆಸ್ತಿ ಶೇ.1ಕ್ಕಿಂತ ಕಡಿಮೆ ಇದೆ.ಲೆಕ್ಕಪರಿಶೋಧನೆಯಲ್ಲಿ ಎ ಗ್ರೇಡ್ ಬಂದಿದೆ. ಭಾರತೀಯ ರಿಸರ್ವ್ ಬ್ಯಾಂಕಿನ ನಿಯಮಗಳ ಪ್ರಕಾರ ‘ಆರ್ಥಿಕವಾಗಿ ಬಲಿಷ್ಠ ಮತ್ತು ಉತ್ತಮ ಆಡಳಿತ ಬ್ಯಾಕ್’ ಎಂಬ ಸಿರ್ಟಿಫಿಕೇಟ್ ಪಡೆದುಕೊಂಡಿದೆ.ಸಿಕೆವೈಸಿ, ಸಿಐಬಿಐಎಲ್, ಸಿ.ಆರ್ ಎಸ್ಎಐ ಪೂರ್ಣಗೊಳಿಸಿದೆ.ಐಎಸ್ ಅಡಿಟ್, ಸೈಬರ್ ಸೆಕ್ಯೂರಿಟಿ ಅಡಿಟ್ ಮಾಡಲಾಗಿದೆ. ವಿಟ್ಲದಲ್ಲಿ ಶಾಖೆ ಆರಂಭಿಸಿ ಉತ್ತಮ ವ್ಯವಹಾರ ನಡೆಯುತ್ತಿದೆ. 2025-26ನೇ ಸಾಲಿನಲ್ಲೂ ಇನ್ನೊಂದು ಶಾಖೆ ತೆರೆಯಲು ಯೋಜನೆ ಹಾಕಿಕೊಂಡಿದ್ದೇವೆ. ಬ್ಯಾಂಕಿಗೆ ಸೋಲಾರ್ ವಿದ್ಯುತ್ ಗ್ರಿಡ್ ಸ್ಥಾಪಿಸಿ ವಿದ್ಯುತ್ ಶಕ್ತಿ ಯೋಜನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ.ಸವಾಲಾಗಿರುವ ಸಾಲಗಳನ್ನು ವಸೂಲು ಮಾಡಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎರಡು ಅಂಗಡಿ ಕೋಣೆಗಳನ್ನು ಸ್ವಾಧೀನಕ್ಕೆ ಪಡೆಯಲಾಗಿದೆ.ಬ್ಯಾಂಕಿನ ಲ್ಯಾಂಕಿನ ಭದ್ರತೆಗಾಗಿ : ಸೆಕ್ಯೂರಿಟಿ ಸಿಸಿಟಿವಿ ಅಳವಡಿಸಿದ್ದೇವೆ.ಹಗಲು, ರಾತ್ರಿ ಕಾವಲುಗಾರರನ್ನು ನೇಮಿಸಲಾಗಿದೆ.ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸೈನ್ ಇನ್ ಸೆಕ್ಯೂರಿಟಿ ಸಹಾಯದಿಂದ 24 ಗಂಟೆಗಳ ಕಾಲ ಕಂಟ್ರೋಲ್ ರೂಮ್ ಮುಖಾಂತರ ಭದ್ರತೆ ಮೇಲೆ ಕಣ್ಣಾವಲು ಇಡುವ ವ್ಯವಸ್ಥೆ ಮಾಡಲಾಗಿ ಮಾಡಲಾಗಿದೆ.ಬ್ಯಾಂಕ್ನಲ್ಲಿ ಚಿನ್ನಾಭರಣ, ಗೃಹ, ಆಸ್ತಿ ಅಡಮಾನ,ವಾಹನ ಸಾಲ,ಆಸ್ತಿ ಭದ್ರತೆಯ ಮೇಲೆ ಓವರ್ ಡ್ರಾಫ್ಟ್ ಸೌಲಭ್ಯ ಸಹಿತ ಹಲವು ಸಾಲ ಯೋಜನೆ ಆರಂಭಿಸಿದ್ದೇವೆ ಎಂದವರು ಹೇಳಿದರು.
ಹಲವು ಹೊಸ ಯೋಜನೆಗಳಿಗೆ ಮಹಾಸಭೆಯಲ್ಲಿ ಚಾಲನೆ:
ಕಾಲ ಬದಲಾಗುತ್ತಿದ್ದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗುತ್ತಿವೆ.ಯುವ ಪೀಳಿಗೆಯನ್ನು ನಮ್ಮ ಬ್ಯಾಂಕಿನತ್ತ ಸೆಳೆಯಬೇಕಾದ ಅವಶ್ಯಕತೆ ಇದೆ.ಇತರ ಬ್ಯಾಂಕ್ಗಳ ಜೊತೆಗೆ ಸ್ಪರ್ಧಿಸುವ ಅವಶ್ಯಕತೆಯೂ ಕತೆಯೂ ಇದೆ.ಈ ನಿಟ್ಟಿನಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳುವ ಕ್ರಾಂತಿಕಾರಿ ಹೆಜ್ಜೆಯಿಡಲು ಯೋಚಿಸಲಾಗಿದೆ. ಹಾಗಾಗಿ ಬ್ಯಾಂಕ್ ಗ್ರಾಹಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕೆ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು. ಗ್ರಾಹಕರಿಗೆ ಚೆಕ್ ಕಲೆಕ್ಷನ್ಗೆ ಈ ಹಿಂದೆ 3 ದಿನ ತಗಲುತ್ತಿತ್ತು.ಈಗ ಸಿಟಿಎಸ್ ಕ್ಲಿಯರಿಂಗ್ ಕ್ಷೇತ್ರಕ್ಕೆ ಬ್ಯಾಂಕ್ ಕಾಲಿಟ್ಟಿದೆ. ಇನ್ವರ್ಡ್ ಮತ್ತು ಔಟ್ವರ್ಡ್ ಕ್ಲಿಯರಿಂಗ್ ಎರಡರಲ್ಲೂ ಸಿಟಿಎಸ್ ಕ್ಲಿಯರಿಂಗ್ ವ್ಯವಸ್ಥೆ ಪ್ರಾರಂಭಿಸಲಾಗುತ್ತಿದೆ.ನೇರ ಹಣ ವರ್ಗಾವಣೆಗಾಗಿ ನೇರ ಆರ್ಟಿಜಿ ಮತ್ತು ಎನ್ಇಎಫ್ಟಿ ‘ವ್ಯವಸ್ಥೆ ವ್ಯ ಜಾರಿಗೊಳಿಸಿದ್ದು,ಆ್ಯಕ್ಸಿಸ್ ಬ್ಯಾಂಕ ಸಹಕಾರದಲ್ಲಿ ಬ್ಯಾಂಕ್ ಐಎಫ್ಎಸ್ಸಿ ಕೋಡ್ ಹೊಂದಿದ್ದು,ನೇರ ಹಣ ವರ್ಗಾವಣೆ ಮಾಡಲಾಗುವುದು.ಮೊಬೈಲ್ ಬ್ಯಾಂಕಿಂಗ್ಗೂ ಚಾಲನೆ ನೀಡಲಾಗುವುದು ಜೊತೆಗೆ ಎಟಿಎಮ್ ಕಾರ್ಡ್ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಕಿಶೋರ್ ಕೊಳತ್ತಾಯ ಎನ್. ಹೇಳಿದರು.
ಮೊಬೈಲ್ ಬ್ಯಾಂಕಿಂಗ್ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಮಾತನಾಡಿ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಅನುಕೂಲ ಆಗುವಂತೆ ಮೊಬೈಲ್ ಬ್ಯಾಂ ಲ್ ಬ್ಯಾಂಕಿಂಗ್ ಪ್ರಮುಖ ಅಂಶ.ಸದ್ಯಕ್ಕೆ ಮೊಬೈಲ್ನಲ್ಲಿ ಮೊಬೈಲ್ ಬ್ಯಾಂಕಿಂಗ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಗ್ರಾಹಕರು ತಮ್ಮ ಖಾತೆಯ ವಿವರ ಮತ್ತು ಎಮ್ ಪಾಸ್ ಬುಕ್ ಪಡೆಯಬಹುದು.ಸದ್ಯ ನಾವು ಗ್ರಾಹಕರಿಗೆ ಬ್ಯಾಂಕ್ನಲ್ಲೇ ಆ್ಯಪ್ ಅಳವಡಿಸಿಕೊಡುತ್ತೇವೆ.ಸೈಬರ್ من ಕ್ರೈಮ್ ಮುನ್ನೆಚ್ಚರಿಕೆಯಾಗಿ ಸದಸ್ಯ ಗ್ರಾಹಕರ ಇಮೇಲ್ಗೆ ಆ್ಯಪ್ ಲಿಂಕ್ ಕಳುಹಿಸುತ್ತೇವೆ.ಅವರು ಅದನ್ನು ಡೌನ್ಲೋಡ್ ಮಾಡಿ ಮೊಬೈಲ್ ಬ್ಯಾಂಕಿಂಗ್ ಬಳಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು
ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ ಗೌಡ ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ್ ಶೆಟ್ಟಿ, ನಿರ್ದೇಶಕರಾದ ರಾಮಚಂದ್ರ ಕಾಮತ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ಕಿರಣ್ ಕುಮಾರ್ ರೈ, ಸುಜೀಂದ್ರ ಪ್ರಭು, ಮಲ್ಲೇಶ್ ಕುಮಾರ್, ಶ್ರೀಧರ ಪಟ್ಟ ಗಣೇಶ್ ಕೌಕ್ರಾಡಿ, ಸೀಮಾ ಎಂ.ಬಿ, ವೀಣಾ, ರಾಜು ಶೆಟ್ಟಿ, ಹರೀಶ್ ಬಿಜತ್ರೆ ಉಪಸ್ಥಿತರಿದ್ದರು.
ಸೆ. 14ರಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕಿನ 116ನೇ ಮಹಾಸಭೆ | ಸಂಪೂರ್ಣ ಡಿಜಿಟಲೀಕರಣ ಸೇರಿದಂತೆ ಹಲವು ಹೊಸತನ: ಕಿಶೋರ್ ಕುಮಾರ್ ಕೊಳತ್ತಾಯ
What's your reaction?
Related Posts
ಲೋಕಾಯುಕ್ತ ಬಲೆಗೆ ಬಿದ್ದಿರುವ ಗ್ರಾಮ ಪಂಚಾಯತ್ ಅಧ್ಯಕ್ಷೆಯ ವಜಾಕ್ಕೆ ಬಿಜೆಪಿ ಒತ್ತಾಯ!
ಪುತ್ತೂರು: ಲೋಕಾಯುಕ್ತ ಬಲೆಗೆ ಬಿದ್ದಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರು…
ಸೆ. 16: ವಿಶ್ವಕರ್ಮ ಪೂಜೆ, ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ| ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ಮುಂಭಾಗದಿಂದ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ವಿಶ್ವಕರ್ಮ ದೇವರ ಮೆರವಣಿಗೆ
ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜದ ನೇತೃತ್ವದಲ್ಲಿ ವಿಶ್ವಬ್ರಾಹ್ಮಣ ಸೇವಾ ಸಂಘದ…
ಕೊಂಬೆಟ್ಟು ರಸ್ತೆಯಲ್ಲಿ ವಾಹನ ಪಾರ್ಕಿಂಗ್: ಪೊಲೀಸ್ ಕಾರ್ಯಾಚರಣೆ
ಪುತ್ತೂರು: ಕೊಂಬೆಟ್ಟು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ವಾಹನಗಳ ವಿರುದ್ಧ ಪುತ್ತೂರು ನಗರ…
ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ
ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…
ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ
ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…
ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ
ಪುತ್ತೂರು: ಪ್ರಯಾಣಿಕರ ಬಹುಕಾಲದ ಬೇಡಿಕೆಯೊಂದು ಈ ಬಾರಿ ಈಡೇರಿದೆ. ಪುತ್ತೂರಿನಿಂದ ಬೆಂಗಳೂರಿಗೆ…
ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಿ: ಡಿ ಜಿ ಗೆ ಶಾಸಕ ಅಶೋಕ್ ರೈ ಮನವಿ..!!
ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು…
“ಪುತ್ತೂರ್ದ ಕೆಸರ್ದ ಗೊಬ್ಬು2025” ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ…
ನರಿಮೊಗರು: ನಲ್ ಜಲ್ ಮಿತ್ರ ತರಬೇತಿ ಸಮಾರೋಪ
ಪುತ್ತೂರು ಮತ್ತು ಕಡಬ ತಾಲೂಕಿನ ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ ಜಲ್ ಮಿತ್ರ…
ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿಗೆ ಇಬ್ಬರು ಅಪ್ತ ಸಹಾಯಕರ ನೇಮಕ..!!!
ಪುತ್ತೂರು, ಆ. 2:ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ…