ಪುತ್ತೂರು: ಶತಮಾನ ಕಂಡಿರುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನ ಆಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಇದರ ಪ್ರಮುಖ ಯೋಜನೆಗಳಿಗೆ ಸೆ. 14ರಂದು ನಡೆಯುವ 116ನೇ ವರ್ಷದ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪುತ್ತೂರು ಕೋಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷಕಿಶೋರ್ ಕೊಳತ್ತಾಯ ಎನ್ ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 2024-25ನೇ ಸಾಲಿನಲ್ಲಿ ನಮ್ಮ ಬ್ಯಾಂಕ್ ಇತಿಹಾಸದಲ್ಲಿ ಒಂದು ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು ಠೇವಣಿ ರೂ.74.87 ಕೋಟಿ, ಒಟ್ಟು ಸಾಲ ರೂ.51.39 ಕೋಟಿಗಳಾಗಿದು ,ಒಟ್ಟು ವ್ಯವಹಾರ ರೂ. 126.26 ಕೋಟಿ ದಾಟಿದೆ.ಈ ವರ್ಷದ ನಿವ್ವಳ ಲಾಭ ರೂ.1.04 ಕೋಟಿ ಆಗಿದೆ.ಹಲವು ಯೋಜನೆಗಳನ್ನು ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು.ಆಬಳಿಕ ಈ ಆರ್ಥಿಕ ವರ್ಷಾಂತ್ಯದೊಳಗೆ ಬ್ಯಾಂಕನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ನಮ್ಮ ಪ್ರಯತ್ನ ಸಾಗಲಿದೆ ಎಂದವರು ಹೇಳಿದರು.
ಹಲವು ಸಾಧನೆಗಳು:
ಆರ್ಬಿಐ ನಿಯಮಾನುಸಾರ ಬಲಿಷ್ಠ ಕೋ ಓಪರೇಟಿವ್ ಬ್ಯಾಂಕ್ ಎನಿಸಿಕೊಳ್ಳಲು ಬ್ಯಾಂಕಿನ ನಿವ್ವಳ ಅನುತ್ಪಾದಿತ ಆಸ್ತಿ ಶೇ.1ಕ್ಕಿಂತ ಕಡಿಮೆ ಇದೆ.ಲೆಕ್ಕಪರಿಶೋಧನೆಯಲ್ಲಿ ಎ ಗ್ರೇಡ್ ಬಂದಿದೆ. ಭಾರತೀಯ ರಿಸರ್ವ್ ಬ್ಯಾಂಕಿನ ನಿಯಮಗಳ ಪ್ರಕಾರ ‘ಆರ್ಥಿಕವಾಗಿ ಬಲಿಷ್ಠ ಮತ್ತು ಉತ್ತಮ ಆಡಳಿತ ಬ್ಯಾಕ್’ ಎಂಬ ಸಿರ್ಟಿಫಿಕೇಟ್ ಪಡೆದುಕೊಂಡಿದೆ.ಸಿಕೆವೈಸಿ, ಸಿಐಬಿಐಎಲ್, ಸಿ.ಆರ್ ಎಸ್ಎಐ ಪೂರ್ಣಗೊಳಿಸಿದೆ.ಐಎಸ್ ಅಡಿಟ್, ಸೈಬರ್ ಸೆಕ್ಯೂರಿಟಿ ಅಡಿಟ್ ಮಾಡಲಾಗಿದೆ. ವಿಟ್ಲದಲ್ಲಿ ಶಾಖೆ ಆರಂಭಿಸಿ ಉತ್ತಮ ವ್ಯವಹಾರ ನಡೆಯುತ್ತಿದೆ. 2025-26ನೇ ಸಾಲಿನಲ್ಲೂ ಇನ್ನೊಂದು ಶಾಖೆ ತೆರೆಯಲು ಯೋಜನೆ ಹಾಕಿಕೊಂಡಿದ್ದೇವೆ. ಬ್ಯಾಂಕಿಗೆ ಸೋಲಾರ್ ವಿದ್ಯುತ್ ಗ್ರಿಡ್ ಸ್ಥಾಪಿಸಿ ವಿದ್ಯುತ್ ಶಕ್ತಿ ಯೋಜನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ.ಸವಾಲಾಗಿರುವ ಸಾಲಗಳನ್ನು ವಸೂಲು ಮಾಡಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎರಡು ಅಂಗಡಿ ಕೋಣೆಗಳನ್ನು ಸ್ವಾಧೀನಕ್ಕೆ ಪಡೆಯಲಾಗಿದೆ.ಬ್ಯಾಂಕಿನ ಲ್ಯಾಂಕಿನ ಭದ್ರತೆಗಾಗಿ : ಸೆಕ್ಯೂರಿಟಿ ಸಿಸಿಟಿವಿ ಅಳವಡಿಸಿದ್ದೇವೆ.ಹಗಲು, ರಾತ್ರಿ ಕಾವಲುಗಾರರನ್ನು ನೇಮಿಸಲಾಗಿದೆ.ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸೈನ್ ಇನ್ ಸೆಕ್ಯೂರಿಟಿ ಸಹಾಯದಿಂದ 24 ಗಂಟೆಗಳ ಕಾಲ ಕಂಟ್ರೋಲ್ ರೂಮ್ ಮುಖಾಂತರ ಭದ್ರತೆ ಮೇಲೆ ಕಣ್ಣಾವಲು ಇಡುವ ವ್ಯವಸ್ಥೆ ಮಾಡಲಾಗಿ ಮಾಡಲಾಗಿದೆ.ಬ್ಯಾಂಕ್ನಲ್ಲಿ ಚಿನ್ನಾಭರಣ, ಗೃಹ, ಆಸ್ತಿ ಅಡಮಾನ,ವಾಹನ ಸಾಲ,ಆಸ್ತಿ ಭದ್ರತೆಯ ಮೇಲೆ ಓವರ್ ಡ್ರಾಫ್ಟ್ ಸೌಲಭ್ಯ ಸಹಿತ ಹಲವು ಸಾಲ ಯೋಜನೆ ಆರಂಭಿಸಿದ್ದೇವೆ ಎಂದವರು ಹೇಳಿದರು.
ಹಲವು ಹೊಸ ಯೋಜನೆಗಳಿಗೆ ಮಹಾಸಭೆಯಲ್ಲಿ ಚಾಲನೆ:
ಕಾಲ ಬದಲಾಗುತ್ತಿದ್ದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗುತ್ತಿವೆ.ಯುವ ಪೀಳಿಗೆಯನ್ನು ನಮ್ಮ ಬ್ಯಾಂಕಿನತ್ತ ಸೆಳೆಯಬೇಕಾದ ಅವಶ್ಯಕತೆ ಇದೆ.ಇತರ ಬ್ಯಾಂಕ್ಗಳ ಜೊತೆಗೆ ಸ್ಪರ್ಧಿಸುವ ಅವಶ್ಯಕತೆಯೂ ಕತೆಯೂ ಇದೆ.ಈ ನಿಟ್ಟಿನಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳುವ ಕ್ರಾಂತಿಕಾರಿ ಹೆಜ್ಜೆಯಿಡಲು ಯೋಚಿಸಲಾಗಿದೆ. ಹಾಗಾಗಿ ಬ್ಯಾಂಕ್ ಗ್ರಾಹಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕೆ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು. ಗ್ರಾಹಕರಿಗೆ ಚೆಕ್ ಕಲೆಕ್ಷನ್ಗೆ ಈ ಹಿಂದೆ 3 ದಿನ ತಗಲುತ್ತಿತ್ತು.ಈಗ ಸಿಟಿಎಸ್ ಕ್ಲಿಯರಿಂಗ್ ಕ್ಷೇತ್ರಕ್ಕೆ ಬ್ಯಾಂಕ್ ಕಾಲಿಟ್ಟಿದೆ. ಇನ್ವರ್ಡ್ ಮತ್ತು ಔಟ್ವರ್ಡ್ ಕ್ಲಿಯರಿಂಗ್ ಎರಡರಲ್ಲೂ ಸಿಟಿಎಸ್ ಕ್ಲಿಯರಿಂಗ್ ವ್ಯವಸ್ಥೆ ಪ್ರಾರಂಭಿಸಲಾಗುತ್ತಿದೆ.ನೇರ ಹಣ ವರ್ಗಾವಣೆಗಾಗಿ ನೇರ ಆರ್ಟಿಜಿ ಮತ್ತು ಎನ್ಇಎಫ್ಟಿ ‘ವ್ಯವಸ್ಥೆ ವ್ಯ ಜಾರಿಗೊಳಿಸಿದ್ದು,ಆ್ಯಕ್ಸಿಸ್ ಬ್ಯಾಂಕ ಸಹಕಾರದಲ್ಲಿ ಬ್ಯಾಂಕ್ ಐಎಫ್ಎಸ್ಸಿ ಕೋಡ್ ಹೊಂದಿದ್ದು,ನೇರ ಹಣ ವರ್ಗಾವಣೆ ಮಾಡಲಾಗುವುದು.ಮೊಬೈಲ್ ಬ್ಯಾಂಕಿಂಗ್ಗೂ ಚಾಲನೆ ನೀಡಲಾಗುವುದು ಜೊತೆಗೆ ಎಟಿಎಮ್ ಕಾರ್ಡ್ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಕಿಶೋರ್ ಕೊಳತ್ತಾಯ ಎನ್. ಹೇಳಿದರು.
ಮೊಬೈಲ್ ಬ್ಯಾಂಕಿಂಗ್ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಮಾತನಾಡಿ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಅನುಕೂಲ ಆಗುವಂತೆ ಮೊಬೈಲ್ ಬ್ಯಾಂ ಲ್ ಬ್ಯಾಂಕಿಂಗ್ ಪ್ರಮುಖ ಅಂಶ.ಸದ್ಯಕ್ಕೆ ಮೊಬೈಲ್ನಲ್ಲಿ ಮೊಬೈಲ್ ಬ್ಯಾಂಕಿಂಗ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಗ್ರಾಹಕರು ತಮ್ಮ ಖಾತೆಯ ವಿವರ ಮತ್ತು ಎಮ್ ಪಾಸ್ ಬುಕ್ ಪಡೆಯಬಹುದು.ಸದ್ಯ ನಾವು ಗ್ರಾಹಕರಿಗೆ ಬ್ಯಾಂಕ್ನಲ್ಲೇ ಆ್ಯಪ್ ಅಳವಡಿಸಿಕೊಡುತ್ತೇವೆ.ಸೈಬರ್ من ಕ್ರೈಮ್ ಮುನ್ನೆಚ್ಚರಿಕೆಯಾಗಿ ಸದಸ್ಯ ಗ್ರಾಹಕರ ಇಮೇಲ್ಗೆ ಆ್ಯಪ್ ಲಿಂಕ್ ಕಳುಹಿಸುತ್ತೇವೆ.ಅವರು ಅದನ್ನು ಡೌನ್ಲೋಡ್ ಮಾಡಿ ಮೊಬೈಲ್ ಬ್ಯಾಂಕಿಂಗ್ ಬಳಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು
ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ ಗೌಡ ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ್ ಶೆಟ್ಟಿ, ನಿರ್ದೇಶಕರಾದ ರಾಮಚಂದ್ರ ಕಾಮತ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ಕಿರಣ್ ಕುಮಾರ್ ರೈ, ಸುಜೀಂದ್ರ ಪ್ರಭು, ಮಲ್ಲೇಶ್ ಕುಮಾರ್, ಶ್ರೀಧರ ಪಟ್ಟ ಗಣೇಶ್ ಕೌಕ್ರಾಡಿ, ಸೀಮಾ ಎಂ.ಬಿ, ವೀಣಾ, ರಾಜು ಶೆಟ್ಟಿ, ಹರೀಶ್ ಬಿಜತ್ರೆ ಉಪಸ್ಥಿತರಿದ್ದರು.
ಸೆ. 14ರಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕಿನ 116ನೇ ಮಹಾಸಭೆ | ಸಂಪೂರ್ಣ ಡಿಜಿಟಲೀಕರಣ ಸೇರಿದಂತೆ ಹಲವು ಹೊಸತನ: ಕಿಶೋರ್ ಕುಮಾರ್ ಕೊಳತ್ತಾಯ
What's your reaction?
- 694c
- 694cc
- 6ai technology
- 6ajjavara
- 6alwas
- 6apology
- 6artificial intelegence
- 6avg
- 5belthangady-provocative-speech-case-conviction
- 5bihar minister
- 5bjp
- 5bjp leader
- 5bjp national president
- 5bt ranjan
- 5co-operative
- 5coastal
- 5Court convicts accused in provocative speech case
- 5crime
- 5crime news
- 5cyclothon
- 4darmasthala
- 4death news
- 4dust bin
- 4education
- 4fraud
- 4gl
- 4gods own country
- 4gold
- 4google for education
- 4independence
- 4jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 3lokayuktha raid
- 3Mangalore
- 3manipal
- 3minister krishna bairegowda
- 3mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 0teachers
- 0tour
- 0trending
- 0udupi
- 0wastage
Related Posts
ಶಾಲಾ ಅಡುಗೆ ಸಿಬ್ಬಂದಿಯ ಪ್ರಾಣ ಉಳಿಸಿದ ವಿದ್ಯಾರ್ಥಿ: ಮನ್ವಿತ್ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ…
ಬೆಳ್ತಂಗಡಿ: ಸುಮಂತ್ ನಿಗೂಢ ಸಾವು ಪ್ರಕರಣ — ಐವರಿಗೆ ಬ್ರೆನ್ ಮ್ಯಾಪಿಂಗ್
ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ…
ವಿಟ್ಲ: ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ; ಆರೋಪಿಗೆ ನ್ಯಾಯಾಂಗ ಬಂಧನ
ವಿಟ್ಲ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ…
ಪುತ್ತೂರಿನಲ್ಲಿ ಬೃಹತ್ ಮಾನವೀಯ ಕಾರ್ಯಾಚರಣೆ: 7 ನಿರಾಶ್ರಿತರ ರಕ್ಷಣೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ನಡೆದ ಬೃಹತ್…
ಸಂಪ್ಯ: ನಿವೃತ್ತಿಗೊಂಡ ಎ.ಎಸ್.ಐ.ಗಳಾದ ಚಂದ್ರ, ಪರಮೇಶ್ವರ್ ಅವರಿಗೆ ಸನ್ಮಾನ
ಪುತ್ತೂರು: ಪೊಲೀಸ್ ಇಲಾಖೆಯಿಂದ ಸೇವಾ ನಿವೃತ್ತಿ ಪಡೆದ ಇಬ್ಬರು ಎ.ಎಸ್.ಐ.ಗಳಿಗೆ ಸಂಪ್ಯ ಕೊಲ್ಯದ…
ಪುತ್ತೂರು ನಗರಸಭೆಗೆ ಲೋಕಾಯುಕ್ತ ದಾಳಿ!!
ಪುತ್ತೂರು: ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ…
ಪುತ್ತೂರಿನಲ್ಲಿ ‘ಡ್ರಗ್ಸ್ ಬೇಡ ಬ್ರೋ’ ಜಾಗೃತಿ; ಸಂಪ್ಯ ಪೊಲೀಸರಿಂದ ಬೈಕ್ ರ್ಯಾಲಿ
ಪುತ್ತೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ…
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗನ ಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಬೊಳುವಾರು…
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ
ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ…
ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
ಪುತ್ತೂರು: ವಿಶ್ವದಾದ್ಯಂತ ಕರಾಟೆ ಕುರಿತು ಜಾಗೃತಿ ಮೂಡಿಸುವ ಜೊತೆಗೆ 2030ರೊಳಗೆ 8 ಕೋಟಿ…
































