tamanvi
ದೇಶಸ್ಥಳೀಯ

ಏ. 26, ಮೇ 7 ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ: ಇಲ್ಲಿದೆ ಆಯೋಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಕರ್ನಾಟಕದಲ್ಲಿ ಏಪ್ರಿಲ್ 26ರಿಂದ ಮೇ 7ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ. 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ಜರಗಲಿದೆ.

maithri

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ದಕ್ಷಿಣ ಕನ್ನಡದಲ್ಲಿ ಮೊದಲ ಹಂತದ ದಿನವೇ ಅಂದರೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಲಾಯಿತು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ದೇಶದಲ್ಲಿ 97 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದಾರೆ. ಇದರಲ್ಲಿ 49.72 ಕೋಟಿ ಪುರುಷರಿದ್ದಾರೆ. 47.15 ಕೋಟಿ ಮಹಿಳೆಯರು. 1.90 ಕೋಟಿ 80 ವರ್ಷ ದಾಟಿದ ಮತದಾರರಿದ್ದಾರೆ. 2.18 ಲಕ್ಷ ಮಂದಿ ಶತಾಯುಷಿ ಮತದಾರರಿದ್ದಾರೆ. 88.4 ಲಕ್ಷ ವಿಶೇಷ ಚೇತನ ಮತದಾರರಿದ್ದಾರೆ. ತೃತೀಯ ಲಿಂಗಿ ಮಯದಾರರ ಸಂಖ್ಯೆ 48 ಸಾವಿರ. 1.8 ಕೋಟಿ ಮಂದಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ದೇಶದಲ್ಲಿ 10 ಲಕ್ಷದ 500 ಸಾವಿರ ಮತಗಟ್ಟೆಗಳಿವೆ. 55 ಲಕ್ಷ ಇವಿಎಂ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜೂನ್ 16ಕ್ಕೆ ಲೋಕಸಭೆಯ ಅವಧಿ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ ಅವರು, ಆ ಹೊತ್ತಿಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ಇಂತಹ ಸರ್ಕಾರವನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗ ಸನ್ನದ್ಧವಾಗಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 148