ಸ್ಥಳೀಯ

ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾ‌ರ್ ಪುತ್ತಿಲ ಎಂಟ್ರಿ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದರು.

maithri

ಕಳೆದ ಕೆಲ ವರ್ಷಗಳಿಂದ ಪುತ್ತಿಲ ಅವರು ಬಿಜೆಪಿ ಕಚೇರಿಗೆ ತೆರಳಿರಲಿಲ್ಲ. ಇದೀಗ ಬಿಜೆಪಿ ಪ್ರಮುಖರು ಬಿಜೆಪಿ ಕಚೇರಿಗೆ ಸ್ವಾಗತಿಸಿಕೊಂಡಿದ್ದಾರೆ.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು. ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾ‌ರ್ ಪುತ್ತಿಲ ಜೊತೆಗಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ,ಆರ್ ಸಿ ನಾರಾಯಣ್ ಸಹಜ್ ರೈ,ಸುರೇಶ್ ಕಣ್ಣರಾಯ, ಸುಧೀ‌ರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖ‌ರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125