Gl
ಕರಾವಳಿಸ್ಥಳೀಯ

ಜಿಲ್ಲಾ ಗಡಿಯಲ್ಲಿ ನಕ್ಸಲ್ ಗಡಿಬಿಡಿ!

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

rachana_rai
Pashupathi
akshaya college
Balakrishna-gowda

ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗದ ಕಾಡಿನಂಚಿನ ಕೂಜಿಮಲೆ ಎಂಬಲ್ಲಿ ನಕ್ಸಲರು ಶನಿವಾರ ಸಂಜೆ ಪ್ರತ್ಯಕ್ಷರಾಗಿದ್ದಾರೆ. ಮಡಿಕೇರಿ ತಾಲೂಕು ಕಾಲೂರು ಗ್ರಾಮದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ಮಾವೋವಾದಿಗಳು, ಕೂಜಿಮಲೆಯ ದಿನಸಿ ಅಂಗಡಿಯೊಂದರಿಂದ 4 ಸಾವಿರ ರೂ.ಗಳಷ್ಟು ಬೆಲೆಯ ದಿನಸಿಯನ್ನು ಖರೀದಿಸಿದರು.

pashupathi

8 ಜನರಿದ್ದ ನಕ್ಸಲೀಯರ ತಂಡದವರು ನಗದು ನೀಡಿ ಸಾಮಗ್ರಿ ಖರೀದಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಕೆಂಪು ಉಗ್ರರು ಪ್ರತ್ಯಕ್ಷಗೊಂಡಿದ್ದಾರೆ. 2012ರಲ್ಲಿ ಇದೇ ಕಾಲೂರು ಗ್ರಾಮದಲ್ಲಿ ನಕ್ಸಲೀಯರು ಕಾಣಿಸಿಕೊಂಡಿದ್ದರು. 2018ರ ಫೆಬ್ರವರಿ ತಿಂಗಳಿನಲ್ಲಿ ಇಲ್ಲಿಗೆ ಸಮೀಪದ ಸಂಪಾಜೆ ಗುಡ್ಡೆಗದ್ದೆಯಲ್ಲಿ ಒಂದು ತಂಡ ಕಾಣಿಸಿಕೊಂಡಿತ್ತು.

ಕೊಡಗಿಗೆ ಸೇರಿರುವ ಕೂಜಿಮಲೆಗೆ ಸಮೀಪದಲ್ಲಿ ದಕ್ಷಿಣ ಕನ್ನಡದ ಗುತ್ತಿಗಾರು, ಕೊಲ್ಲಮೊಗರು, ಕಲ್ಮಕಾರು ಗ್ರಾಮಗಳಿವೆ. ಇಲ್ಲಿ ಬಹು ವಿಸ್ತಾರವಾದ ಕೂಜಿಮಲೆ ರಬ್ಬರ್ ಎಸ್ಟೇಟ್ ಇದೆ. ಇಲ್ಲಿನ ಕಾಡಿನಲ್ಲಿ ಎರಡು ದಶಕಗಳಿಗೆ ಹಿಂದೆ ಕೆಂಪು ಬಣ್ಣದ ಖನಿಜಗಲ್ಲು ನೆಲದಲ್ಲಿ ಕಾಣಿಸಿಕೊಂಡಿತ್ತು. ಇದನ್ನು ಪಡೆಯಲು ಜನ ನಾಮುಂದು ತಾಮುಂದು ಎಂದು ನುಗ್ಗಿ ಅಕ್ರಮ ಗಣಿಗಾರಿಕೆ ನಡೆಸಿದ್ದರು. ಇಲ್ಲಿನ ಅನೇಕರು ರಾತ್ರೋರಾತ್ರಿ ಶ್ರೀಮಂತರಾಗಿದ್ದರೆ, ಅನೇಕ ಮಂದಿ ಹೇಳಹೆಸರಿಲ್ಲದೆ ನಾಪತ್ತೆಯಾಗಿದ್ದರು.

ಸದ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಕ್ಸಲರು ಆಕ್ಟಿವ್ ಆಗಿದ್ದಾರೆ ಎಂದು ಶಂಕಿಸಲಾಗಿದೆ. ನಿರ್ದಿಷ್ಟ ಪಕ್ಷದ ಕುರಿತ ಕಾರ್ಯಾಚರಣೆ ನಡೆಸಲು ಉದ್ದೇಶಿಸಿರಬಹುದು ಎಂದು ಭಾವಿಸಲಾಗಿದೆ. ಉಭಯ ಜಿಲ್ಲೆಗಳ ಗಡಿಯಲ್ಲಿ ಪೊಲೀಸರು ನಿಗಾ ಇಟ್ಟಿದ್ದಾರೆ. ಇಲ್ಲಿ ಓಡಾಡುವ ಅಪರಿಚಿತ ವಾಹನಗಳ ಮೇಲೂ ನಿಗಾ ಇಡಲಾಗಿದೆ. ಚುನಾವಣಾ ನೀತಿ ಸಂಹಿತೆಯ ಭಾಗವಾಗಿ ಚೆಕ್‌ಪೋಸ್ಟ್‌ಗಳನ್ನೂ ಇದೀಗ ನಿರ್ಮಿಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 124