ಪುತ್ತೂರು: ಅ.20ರಂದು ನಡೆದ ಅಶೋಕ ಜನಮನ ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಆರೋಗ್ಯವನ್ನು ಮಾಜಿ ಶಾಸಕ ಸಂಜೀವ ಮಠಂದೂರು ವಿಚಾರಿಸಿದರು.
ಆಸ್ಪತ್ರೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ನಗರಸಭೆ ಸದಸ್ಯೆ ದೀಕ್ಷಾ ಪೈ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಹಾಗೂ ಹಲವು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.