ಸ್ಥಳೀಯ

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.

maithri

ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ಮಂಗವನ್ನು ಜಿಡೆಕಲ್ಲು ಕಾಲೇಜು ವಿದ್ಯಾರ್ಥಿ ಚಂದನ್ ಗಮನಿಸಿ, ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪಶು ಇಲಾಖೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.

ಅರಣ್ಯ ಇಲಾಖೆಯ ಉಲ್ಲಾಸ್, ಸುಧೀರ್ ಹೆಗ್ಡೆ, ಉರಗ ತಜ್ಞ ತೇಜಸ್ ಅವರು ಮಂಗಳೂರು ಇಲಾಖೆಯ ಪಶುವೈದ್ಯರ ಬಳಿಗೆ ಕರೆದೊಯ್ದರು.

ಮರ್ಕಟನ ರಕ್ಷಣೆ ವೇಳೆ ವಿದ್ಯಾರ್ಥಿ ಚಂದನ್ ಅವರ ಕೈಗೆ ಮಂಗ ಕಚ್ಚಿದ್ದು, ಅವರಿಗೆ ಟಿ.ಟಿ‌ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124