tamanvi
ಸ್ಥಳೀಯ

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.

maithri

ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ಮಂಗವನ್ನು ಜಿಡೆಕಲ್ಲು ಕಾಲೇಜು ವಿದ್ಯಾರ್ಥಿ ಚಂದನ್ ಗಮನಿಸಿ, ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪಶು ಇಲಾಖೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.

ಅರಣ್ಯ ಇಲಾಖೆಯ ಉಲ್ಲಾಸ್, ಸುಧೀರ್ ಹೆಗ್ಡೆ, ಉರಗ ತಜ್ಞ ತೇಜಸ್ ಅವರು ಮಂಗಳೂರು ಇಲಾಖೆಯ ಪಶುವೈದ್ಯರ ಬಳಿಗೆ ಕರೆದೊಯ್ದರು.

ಮರ್ಕಟನ ರಕ್ಷಣೆ ವೇಳೆ ವಿದ್ಯಾರ್ಥಿ ಚಂದನ್ ಅವರ ಕೈಗೆ ಮಂಗ ಕಚ್ಚಿದ್ದು, ಅವರಿಗೆ ಟಿ.ಟಿ‌ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 126