tamanvi
ಕರಾವಳಿಸ್ಥಳೀಯ

ಶಂಕಿತ ನಕ್ಸಲ್ ಭೇಟಿ: ಕೂಂಬಿಂಗ್ ಆರಂಭಿಸಿದ ಎನ್.ಐ.ಎ.

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌.

maithri

ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು.

ಶನಿವಾರ ಸಂಜೆ ಕೂಜಿಮಲೆಯ ಅಂಗಡಿಯೊಂದರಿಂದ ಎಂಟು ಮಂದಿಯ ತಂಡ ಭೇಟಿ ನೀಡಿ ನಗದು ನೀಡಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು, ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ನಕ್ಸಲರ ತಂಡದಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದರು ಎನ್ನಲಾಗುದ್ದು, ಸಶಸ್ತ್ರಧಾರಿಗಳಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174