ಕರಾವಳಿಸ್ಥಳೀಯ

ಶಂಕಿತ ನಕ್ಸಲ್ ಭೇಟಿ: ಕೂಂಬಿಂಗ್ ಆರಂಭಿಸಿದ ಎನ್.ಐ.ಎ.

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌.

maithri

ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು.

ಶನಿವಾರ ಸಂಜೆ ಕೂಜಿಮಲೆಯ ಅಂಗಡಿಯೊಂದರಿಂದ ಎಂಟು ಮಂದಿಯ ತಂಡ ಭೇಟಿ ನೀಡಿ ನಗದು ನೀಡಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು, ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ನಕ್ಸಲರ ತಂಡದಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದರು ಎನ್ನಲಾಗುದ್ದು, ಸಶಸ್ತ್ರಧಾರಿಗಳಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 169