tamanvi
ಕರಾವಳಿಸ್ಥಳೀಯ

ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ.

maithri

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜಕೀಯ ಪಕ್ಷಗಳು, ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ಪಡೆಯಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿರುವ ಏಕ ಗವಾಕ್ಷಿ ಪದ್ಧತಿಯಡಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು ಪರಿಚಯಿಸಿರುವ ‘ಸುವಿಧಾ ಆಪ್’ ಮೂಲಕವೂ ಅನುಮತಿ ಪಡೆಯಬಹುದಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿಯೂ ಅನುಮತಿ ಪಡೆಯಬೇಕು ಎಂದ ಅವರು, ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕೆಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174