ದೇಶಸ್ಥಳೀಯ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ! ತುರ್ತು ವಿಚಾರಣೆಯ ಮೊರೆ ಹೋದ ಕೇಜ್ರಿವಾಲ್ ಕಾನೂನು ತಂಡ!

GL

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ.
ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿಯ ಹೇಳಿಕೆಯನ್ನು ದಾಖಲಿಸಿಕೊಂಡು ಬಂಧನ ಮಾಡಿದೆ.
ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ತತ್ ಕ್ಷಣವೇ ಈ ವಿಷಯದ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

maithri

ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮಗೊಳ್ಳುವುದರ ವಿರುದ್ಧ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಆಲಿಸಿದ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, “ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಕೇಜ್ರಿವಾಲ್ ನಿವಾಸದ ಮುಂದೆ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸದ ಹೊರಗೆ ರಾಪಿಡ್ ಆಕ್ಷನ್ ಫೋರ್ಸ್ (RAF) ಕೂಡ ಹಾಜರಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

1 of 145