tamanvi
ಸ್ಥಳೀಯ

ಈ ಬಾರಿ ಪ್ರಧಾನಿ ಮೋದಿ ಕರಾವಳಿಗೆ ಬರೋದ್ಯಾವಾಗ? | ಪ್ರತಿ ಚುನಾವಣೆ ಸಂದರ್ಭವೂ ರ್ಯಾಲಿ ನಡೆಸುತ್ತಿದ್ದ ಮೋದಿಯ ಕರಾವಳಿ ಭೇಟಿಯ ಬಗ್ಗೆ ಮೂಲಗಳು ಏನೆನ್ನುತ್ತವೆ?

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪ್ರತೀ ಚುನಾವಣೆ ವೇಳೆಯೂ ಕರಾವಳಿಗೆ ಆಗಮಿಸಿ ಭರ್ಜರಿ ರೋಡ್‌ ಶೋ, ಪ್ರಚಾರ ಸಭೆ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಈ ಕಡೆ ಬರುವುದಿಲ್ಲವೇ?…ಹೀಗೊಂದು ಪ್ರಶ್ನೆ ಎದುರಾಗಿದೆ.

ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವ ಕಾರಣ, ಮೋದಿ ಅವರನ್ನು ಗೆಲುವು ಕಠಿನ ಇರುವಂತಹ ಕಡೆಗಳ ರ್‍ಯಾಲಿಗಳಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲು ಬಿಜೆಪಿ ವರಿಷ್ಠರು ಆಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದುವರೆಗೆ ಮಂಗಳೂರಿನ ಭೇಟಿ ತಪ್ಪಿಸದ ಮೋದಿ;

ಮೋದಿ ಅವರು ಕರಾವಳಿಯಲ್ಲಿ ಇದುವರೆಗೆ ಚುನಾವಣೆ ಪ್ರಚಾರವನ್ನು ತಪ್ಪಿಸಿಲ್ಲ. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ 2014ರ ಫೆಬ್ರವರಿಯಲ್ಲಿ ನೆಹರೂ ಮೈದಾನದಲ್ಲಿ ನಡೆದ ಭಾರತ ಗೆಲ್ಲಿಸಿ ಸಮಾವೇಶ, 2019ರ ಎಪ್ರಿಲ್‌ ನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶಗಳಲ್ಲಿ ಮೋದಿ ಪಾಲ್ಗೊಂಡಿದ್ದರು. 2013ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರ ರ್ಯಾಲಿಯಲ್ಲಿ ಇದೇ ಮೈದಾನದಲ್ಲಿ ಬೃಹತ್‌ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ್ದರು. 2018ರಲ್ಲೂ ವಿಧಾನಸಭಾ ಚುನಾವಣ ಪ್ರಚಾರಕ್ಕೆ ಮಂಗಳೂರಿಗೆ ಬಂದು “ಸರಕಾರ ಬದಲಿಸಿ ಬಿಜೆಪಿ ಗೆಲ್ಲಿಸಿ’ ಅಭಿಯಾನ ನಡೆಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲೂ ಮೂಲ್ಕಿಯ ಕಾರ್ನಾಡ್‌ ಬಳಿಯ ಮೈದಾನದಲ್ಲಿ ಹಾಗೂ ಉಡುಪಿಯಲ್ಲೂ ಚುನಾವಣ ರ್ಯಾಲಿಗಳಲ್ಲಿ ಮೋದಿ ಭಾಗವಹಿಸಿದ್ದರು.

ಬಂದರೂ ಬರಬಹುದು!;

ಸದ್ಯದ ಮಾಹಿತಿ ಪ್ರಕಾರ ಮತ್ತೆ ಕರಾವಳಿಗೆ ಮೋದಿ ಬರುವ ಸಾಧ್ಯತೆ ಕಡಿಮೆ. ಆದರೆ ಇನ್ನೂ ಕೆಲವರ ಪ್ರಕಾರ ಚುನಾವಣ ಪ್ರಚಾರ ಇನ್ನೂ ಆರಂಭವಾಗಿಲ್ಲ, ಒಂದುವೇಳೆ ಮುಂದೆ ಸಮಯ ಸಿಕ್ಕಿದರೆ ಮೋದಿ ರ್ಯಾಲಿಯನ್ನೋ ಅಥವಾ ತುರ್ತು ರೋಡ್‌ ಶೋಗಳನ್ನೋ ನಿಗದಿ ಪಡಿಸುವ ಸಾಧ್ಯತೆಯೂ ಇಲ್ಲದಿಲ್ಲ.

ಒಂದು ವೇಳೆ ಕರಾವಳಿಗೆ ಮೋದಿ ಬರದಿದ್ದರೂ ಕೇಂದ್ರ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಮತ್ತಿತರ ಹಿರಿಯ ಮುಖಂಡರು ಆಗಮಿಸುವ ನಿರೀಕ್ಷೆ ಇದೆ ಎನ್ನುತ್ತಾರೆ ಬಿಜೆಪಿ ನಾಯಕರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134